ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ 37  ನೇ ವಾರ್ಷಿಕ ಸಾಮಾನ್ಯ ಸಭೆ

0

ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘ ಅಲೆಕ್ಕಾಡಿ ಇದರ 37 ನೇ ವಾರ್ಷಿಕ ಸಾಮಾನ್ಯ ಸಭೆಯು ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಭವನದಲ್ಲಿ ಸೆ. 16 ರಂದು ಅಧ್ಯಕ್ಷ ಅಶೋಕ್ ಕುಮಾರ್ ರೈಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಸವಣೂರು ಸೀತಾರಾಮ ರೈ ಅವರನ್ನು ಸನ್ಮಾನಿಸಲಾಯಿತು. ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.