ಐವರ್ನಾಡು : ತ್ಯಾಜ್ಯ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್

0

 

ತ್ಯಾಜ್ಯ ಎಸೆದವರಿಂದಲೇ ವಿಲೇವಾರಿ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ವತ್ತಡ್ಕ ಎಂಬಲ್ಲಿ ತ್ಯಾಜ್ಯ ಎಸೆದವರಿಗೆ ಪಂಚಾಯತ್ ದಂಡ ವಿಧಿಸಿದ ಘಟನೆ ಸೆ.20 ರಂದು ನಡೆದಿದೆ.
ಮುರುಳ್ಯದ ನಿವಾಸಿಗಳಿಗೆ ರೂ 5000.00 ದಂಡ ವಿಧಿಸಲಾಯಿತು.


ಮರ್ವತ್ತಡ್ಕ ಪರಿಸರದಲ್ಲಿ ತರಕಾರಿ ತ್ಯಾಜ್ಯ ತುಂಬಿದ್ದ ಚೀಲ ಹಾಗೂ ಕೊಳೆತ ತರಕಾರಿಗಳು,ಪ್ಲಾಸ್ಟಿಕ್ ಚೀಲಗಳನ್ನು ಎಸೆಯುತ್ತಿರುವ ಸಂಧರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ .ಆರ್ .ರವರು ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ಎಸೆದ ವ್ಯಕ್ತಿಗಳಿಗೆ ದಂಡ ವಿಧಿಸಿ ತ್ಯಾಜ್ಯ ಎಸೆದವರಿಂದಲೇ ತ್ಯಾಜ್ಯವನ್ನು ವಿಲೇವಾರಿಗೊಳಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಜೊತೆಗಿದ್ದರು.