ಜಾಲ್ಸೂರು ಗ್ರಾ.ಪಂ. ಜಮಾಬಂಧಿ

0

 

ಜಾಲ್ಸೂರು ಗ್ರಾಮ ಪಂಚಾಯತಿಯ 2021-22ನೇ ಸಾಲಿನ ವಾರ್ಷಿಕ ಜಮಾಬಂಧಿ ಕಾರ್ಯಕ್ರಮವು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಸೆ.23ರಂದು ಜರುಗಿತು.
ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಅವರು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ್ ಅವರು ಜಮಾಬಂಧಿ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ. ಬಿಲ್ ಕಲೆಕ್ಟರ್ ಚಿದಾನಂದ ಅವರು ಜಮಾಬಂಧಿ ವರದಿ ವಾಚಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರುಗಳಾದ ಶಿವಪ್ರಸಾದ್ ಕುಕ್ಕಂದೂರು, ಈಶ್ವರ ನಾಯ್ಕ ಕುಕ್ಕಂದೂರು, ಶ್ರೀಮತಿ ಅಂಬಿಕಾ ಕುಕ್ಕಂದೂರು, ಶ್ರೀಮತಿ ದೀಪಾ ಅಜಕಳಮೂಲೆ, ಎನ್.ಎಂ. ಸತೀಶ್ ಕೆಮನಬಳ್ಳಿ, ಪಿ.ಆರ್. ಸಂದೀಪ್ ಕದಿಕಡ್ಕ, ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ಅಬ್ದುಲ್ ಮಜೀದ್ ನಡುವಡ್ಕ, ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಶ್ರೀಮತಿ ತಿರುಮಲೇಶ್ವರಿ ಮರಸಂಕ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.