ಸುಳ್ಯ ತಾಲೂಕು ಭಜನಾ ಪರಿಷತ್ತಿನ ಗೌರವಾಧ್ಯಕ್ಷ ಅರ್ಗುಡಿ ವಿಶ್ವನಾಥ ರೈಯವರಿಗೆ ಧರ್ಮಸ್ಥಳದಲ್ಲಿ ಹಿರಿಯ ಸಾಧಕ ಭಜಕ ಪ್ರಶಸ್ತಿ ಪ್ರದಾನ

0

 

ಸುಳ್ಯ ತಾಲೂಕು ಭಜನಾ ಪರಿಷತ್ ನ ಸ್ಥಾಪಕಾಧ್ಯಕ್ಷರು, ಬೀದಿಗುಡ್ಡೆಯ ಸಿದ್ಧಿವಿನಾಯಕ ಭಜನಾ ಮಂಡಳಿ ಸಂಪ್ಯಾಡಿ ಇದರ ಸ್ಥಾಪಕಾಧ್ಯಕ್ಷ ಅರ್ಗುಡಿ ವಿಶ್ವನಾಥ ರೈಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಡಡೆಯವರು ಹಿರಿಯ ಸಾಧಕ ಭಜಕ ಪ್ರಶಸ್ತಿಯನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಣಿಲ ಕ್ಷೇತ್ರದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವದಿಸಿದರು.


ಇವರು ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಬಳ್ಪ ಗ್ರಾಮದ ಹಲವು ದೇವಸ್ಥಾನಗಳ ಜೀರ್ಣೋದ್ಧಾರ, ಬ್ರಹ್ಮ ಕಲಶೋತ್ಸವ ಸಮಿತಿ, ಜಾತ್ರಾ ಸಮಿತಿಗಳಲ್ಲಿ ಪದಾಧಿಕಾರಿಯಾಗಿ ದುಡಿದು ಧಾರ್ಮಿಕ, ಕೃಷಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡಿದ್ದರು. ಪ್ರಸ್ತುತ
ಸುಳ್ಯ ತಾಲೂಕು ಭಜನಾ ಪರಿಷತ್ತಿನ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ದ.ಕ., ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ 15 ತಾಲೂಕುಗಳಲ್ಲಿ 15 ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಸುಳ್ಯ ತಾಲೂಕಿನಲ್ಲಿ ವಿಶ್ವನಾಥ ರೈಯವರು ಪ್ರಥಮವಾಗಿ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.