ಜಾಲ್ಸೂರು : ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

 

ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸೆ.24 ರಂದು ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆಯಿತು.
ಸ್ವಾಸ್ಥ್ಯ ಸಂಕಲ್ಪದ ಬಗ್ಗೆ ನಿವೃತ್ತ ಪೋಲಿಸ್ ಅಧಿಕಾರಿ ಭಾಸ್ಕರ ಅಡ್ಕಾರು ಮಾಹಿತಿ ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಕುಸುಮಾವತಿ ಯು.ಪಿ, ವಲಯ ಒಕ್ಕೂಟ ಅಧ್ಯಕ್ಷ ಮುರಳೀಧರ, ಧ.ಗ್ರಾ.ಯೋಜನೆ
ಮೇಲ್ವಿಚಾರಕ ತೀರ್ಥರಾಮ, ಜಾಲ್ಸೂರು ಒಕ್ಕೂಟ ನಿಯೋಜಿತ ಅಧ್ಯಕ್ಷ ರವಿ ವೇದಿಕೆಯಲ್ಲಿದ್ದರು. ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ, ಸೇವಾಪ್ರತಿನಿಧಿ ವೀಣಾ ಅಡ್ಕಾರು ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಬಾಲಕೃಷ್ಣ ಅಡ್ಕಾರು ಸ್ವಾಗತಿಸಿದರು. ಶಾಲಾ ಶಿಕ್ಷಕ ಶಿವಪ್ರಕಾಶ್ ವಂದಿಸಿದರು.