ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಆಯ್ಕೆ

0

 

ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಪ್ರಧಾನ ಕಾರ್ಯದರ್ಶಿಯಾಗಿ   ಹರಿಹರ ಪಲ್ಲತ್ತಡ್ಕ ನಿವಾಸಿ ಕಾರ್ಕಳದಲ್ಲಿ ಉದಯವಾಣಿ ಪತ್ರಿಕೆಯ ವರದಿಗಾರರಾಗಿರುವ ಬಾಲಕೃಷ್ಣ ಭೀಮಗುಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಪುನಾರ್ ರಚನೆ ಪ್ರಕ್ರೀಯೆ ತಾಲೂಕು ಪ್ರವಾಸಿ ಮಂದಿರದಲ್ಲಿ   ನಡೆಯಿತು.
ಉಡುಪಿ ಜಿಲ್ಲಾ ಕಾರ್ಯಕರ್ತರ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಶ್ ಶೆಟ್ಟಿ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ನಂತರದ ಸ್ಥಾನ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಬಾಲಕೃಷ್ಣ ಭೀಮಗುಳಿ ಹೆಸರು ಹಾಗೂ ಹರೀಶ್ ಆಚಾರ್ಯ ಅವರ ಹೆಸರು ಸೂಚಿಸಲ್ಪಟ್ಟಿತ್ತು. ಸಹಮತದ ಆಯ್ಕೆ ಹಿನ್ನಲೆಯಲ್ಲಿ ಹರೀಶ್ ಆಚಾರ್ಯ ಪ್ರಧಾನ ಕಾರ್ಯದರ್ಶಿ ಸ್ಪರ್ಧೆಯಿಂದ ಹಿಂದೆ ಸರಿದು ಬಾಲಕೃಷ್ಣ ಭೀಮಗುಳಿ ಅವಿರೋಧ ಆಯ್ಕೆಗೆ ಸಹಕರಿಸಿದರು. ಬಾಲಕೃಷ್ಣ ಭೀಮಗುಳಿ ಸರ್ವಾನುಮತದಿಂದ ಅವಿರೋಧ ಆಯ್ಕೆಗೊಂಡರು.