ಬೀದಿಗುಡ್ಡೆ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

0

 

ಬೀದಿಗುಡ್ಡೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ. 23ರಂದು ಸಂಘದ ಅಧ್ಯಕ್ಷರಾದ ಲೋಕೇಶ್ವರ ಕಟ್ಟ ಇವರ ಅಧ್ಯಕ್ಷತೆಯಲಿ ಸಂಘದ ವಠಾರದಲ್ಲಿ ನಡೆಯಿತು.

ಸಂಘದ ವರದಿ ವಾಚಿಸಿದ ಕಾರ್ಯದರ್ಶಿ ಮಹಾಲಿಂಗ ಪ್ರಸಾದ್ ಸಂಘ ರೂ. 2.55 ಲಕ್ಷ ಲಾಭ ಗಳಿಸಿ ಶೇ. 5 ಡಿವಿಡೆಂಟ್ ಹಾಗೂ ಪ್ರತೀ ಲೀಟರ್ ಹಾಲಿಗೆ 71 ಪೈಸೆ ಬೋನಸ್ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು. ಸಂಘದ ನಿರ್ದೇಶಕಿ ರಮಾಗುಣಸಾಗರ ಕಟ್ಟ ಸ್ವಾಗತಿಸಿ ಕಾರ್ಯದರ್ಶಿ ಮಹಾಲಿಂಗ ಪ್ರಸಾದ್ ವಂದಿಸಿದರು. ಸಿಬ್ಬಂದಿ ಮಮತಾ ಎಸ್. ಬಿ. ಸಹಕಾರ ನೀಡಿದರು.