ಅ.1:ಬೀದಿಗುಡ್ಡೆಯಲ್ಲಿ ಅಮೃತ ವರ್ಷಿಣಿ ನೂತನ ಗೋದಾಮು ಕಟ್ಟಡ ಉದ್ಘಾಟನೆ 

0

 

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬೀದಿಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಅಮೃತವರ್ಷಿಣಿ ಗೋದಾಮು ಕಟ್ಟಡದ ಉದ್ಘಾಟನಾ ಸಮಾರಂಭವು ಅ.1 ರಂದು ನಡೆಯಲಿದೆ.

ಗೋದಾಮು ಕಟ್ಟಡವನ್ನು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್ ಅಂಗಾರ ಉದ್ಘಾಟಿಸಲಿದ್ದಾರೆ. ಆದರ್ಶವರ್ಷಿಣಿ ಸಭಾಭವನವನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಸಮಾರಂಭದ ಉದ್ಘಾಟನೆಯನ್ನು ದ. ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಮಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟು, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ ನಾಯಕ್, ಮಂಗಳೂರು ಎ.ಜಿ.ಎಂ ನಬಾರ್ಡ್ ಡಿ.ಡಿ.ಎಂ ಶ್ರೀಮತಿ ಸಂಗೀತಾ ಕರ್ತಾ, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್ ಕೆ , ಸುಳ್ಯ ತಾಲೂಕು ಸಹಕಾರ ಯೂನಿಯನ್ ನ ಅಧ್ಯಕ್ಷ ರಮೇಶ್ ದೇಲಂಪಾಡಿ, ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಸೂಂತಾರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಲಿಗೋಧರ ಆಚಾರ್ಯ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಿ, ನಿರ್ದೇಶಕರಾದ ಚಂದ್ರಶೇಖರ ಶಾಸ್ತ್ರಿ , ಶ್ರೀ ಕೃಷ್ಣ ಭಟ್ ಪಟೋಳಿ, ರಘುನಾಥ ರೈ ಕೆರೆ ಕ್ಕೋಡಿ, ಕಿಟ್ಟಣ್ಣ ಪೂಜಾರಿ ಕಾಂಜಿ, ಚಿನ್ನಪ್ಪ ಗೌಡ ಚೊಟ್ಟೆಮಜಲು, ಗಣೇಶ್ ಪೈ ಪಂಜ, ಶ್ರೀಮತಿ ಮೋಹಿನಿ ಬಿ.ಎಲ್ ಬೊಳ್ಮಲೆ, ಶ್ರೀಮತಿ ಹೇಮಲತಾ ಚಿದ್ಗಲ್, ಮುದಾರ ಐವತ್ತೊಕ್ಲು ಉಪಸ್ಥಿತರಿರುವರು. ಎಂದು ‌ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.