ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ

0

 

ಗಣಪತಿ ಹೋಮ, ಬಲಿವಾಡು ಹುಂಡಿ ಕಾರ್ಯಕ್ರಮ

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಸೆ.25 ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು.
ಬೆಳಿಗ್ಗೆ ಗಣಪತಿ ಹೋಮ, ಬಲಿವಾಡು ಹುಂಡಿ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಕುಮಾರ ಮಂಗಲ ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಸದಸ್ಯರಾದ ಜಯಪ್ರಕಾಶ್ ರೈ.ಬಿ, ದಾಮೋದರ ನಾಯ್ಕ, ಶ್ರೀಮತಿ‌ ಭಾಗ್ಯಲಕ್ಷ್ಮೀ, ಪಿ.ವೆಂಕಟಕೃಷ್ಣ ರಾವ್, ಪಿ.ಜಗನ್ನಾಥ ರೈ, ನಾರಾಯಣ ಕೆ., ಶ್ರೀಮತಿ ಯಶೋಧ ಎ.ಎಸ್. ಹಾಗೂ ಭೋಜರಾಜ ಶೆಟ್ಟಿ, ದೇವಸ್ಥಾನದ ಸಿಬ್ಬಂದಿ ವಸಂತ ಆಚಾರ್ಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಸಂಜೆ ಗಂಟೆ 7.00 ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ಅನಂತ ಪದ್ಮನಾಭರವರು ದೀಪ ಪ್ರಜ್ವಲನೆ ಮಾಡಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಬಂದರು ,ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಮೋಹನರಾಂ ಸುಳ್ಳಿ ಹಾಗೂ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.
ರಾತ್ರಿ ಗಂಟೆ 8.00 ಕ್ಕೆ ಶ್ರೀ ಕ್ಷೇತ್ರದ ರಂಗಪೂಜೆ ನಡೆಯಲಿದೆ.
ಗಂಟೆ 9.00 ಕ್ಕೆ ಭಕ್ತಾದಿಗಳ ಸಾಮೂಹಿಕ ರಂಗಪೂಜೆ ನಡೆಯಲಿದೆ.
ನಂತರ ಮಹಾಪೂಜೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ಪ್ರತೀ ದಿನ ಸಂಜೆ ಗಂಟೆ 7.00ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸೆ.25 ರಂದು ” ನೃತ್ಯಾರ್ಪಣಂ”
ಕಾರ್ಯಕ್ರಮ ನಡೆಯಲಿದೆ.
ಸೆ.26 ರಂದು ಯಕ್ಷಗಾನ ಬಯಲಾಟ ಪ್ರಸಂಗ : ಏಕಾದಶಿ ಶ್ರೀದೇವಿ ಮಹಾತ್ಮೆ ನಡೆಯಲಿದೆ.
ಸೆ.27 ರಂದು ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ.
ಸೆ.28 ರಂದು ” ಯಕ್ಷ – ಗಾನ ವೈಭವ” ನಡೆಯಲಿದೆ.ಸೆ.29 ರಂದು “ಗಿಲಿ ಗಿಲಿ ಮ್ಯಾಜಿಕ್” ಜಾದೂ ಕಾರ್ಯಕ್ರಮ ನಡೆಯಲಿದೆ.
ಸೆ.30 ರಂದು ” ಭಕ್ತಿ ಸುಧೆ” ನಡೆಯಲಿದೆ.
ಅ.1 ರಂದು ” ನೃತ್ಯಾಭಿಷೇಕ ” ನಡೆಯಲಿದೆ.
ಅ.2 ರಂದು ನೃತ್ಯ ವೈವಿಧ್ಯ ನಡೆಯಲಿದೆ.
ಅ.03 ರಂದು “ಸಾಂಸ್ಕೃತಿಕ ವೈಭವ” ನಡೆಯಲಿದೆ.
ಅ.04 ರಂದು ಮದ್ಯಾಹ್ನ ಸಾಂಭವಿ ವಿಲಾಸ ಯಕ್ಷಗಾನ ರಾತ್ರಿ ಮಹಿಷ ವಧೆ ಯಕ್ಷಗಾನ ನಡೆಯಲಿದೆ.
ನಂತರ ಸಭಾ ಕಾರ್ಯಕ್ರಮ ನಡೆಯಲಿದೆ.
ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ದೇವಸ್ಥಾನದ ವ್ಯ.ಸ.ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ಕಾರ್ತಿಕ್ ತಂತ್ರಿಯವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.
ಸೆ.05 ರಂದು ವಿಜಯ ದಶಮಿ ನಡೆಯಲಿದೆ.
ಬೆಳಿಗ್ಗೆ ಕುಣಿತ ಭಜನೆ ನಡೆಯಲಿದೆ.ಸಂಜೆ ಗಂಟೆ 7.00ಕ್ಕೆ “ಭಕ್ತಿ ಗಾನಾಮೃತ” ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.