ಅ.5: ಅಡ್ಕಾರು ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ ಚತುರ್ಥ ವರ್ಷದ ಶಾರದಾಂಬ ಉತ್ಸವ

0

 

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ ಚತುರ್ಥ ವರ್ಷದ ಶಾರದಾಂಬ ಉತ್ಸವವು ಅ.5ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಜರುಗಲಿದೆ.


ಬೆಳಿಗ್ಗೆ ಗಣಪತಿ ಹವನ, ಸಾಮೂಹಿಕ ಪ್ರಾರ್ಥನೆ, ಧ್ವಜಾರೋಹಣ, ಶ್ರೀ ಶಾರದಾಂಬ ದೇವಿಯ ವಿಗ್ರಹ ಪ್ರತಿಷ್ಠೆ, ಲಘು ಉಪಾಹಾರ ನಡೆಯಲಿದೆ.
ಬಳಿಕ 7.30ರಿಂದ ಬಾಲ ಸರಸ್ವತಿ ಹೋಮ, ಅಕ್ಷರಾಭ್ಯಾಸ, ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ.
ಅಪರಾಹ್ನ 3.30ರಿಂದ ಧ್ವಜಾವತರಣ ಬಳಿಕ ಶ್ರೀ ಶಾರದಾಂಬ ದೇವಿಯ ವಿಗ್ರಹವನ್ನು ಸಿಂಗಾರಿಮೇಳ ಮತ್ತು ಕುಣಿತ ಭಜನೆಯೊಂದಿಗೆ ಶೋಭಾಯಾತ್ರೆಗೈದು ಪಯಸ್ವಿನಿ ನದಿಯಲ್ಲಿ ಜಲಸ್ಥಂಭನಗೊಳ್ಳಲಿದೆ.
ಸೆ. 27 ರಂದು ಬೆಳಿಗ್ಗೆ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಕದಿರು ವಿನಿಯೋಗ, ನವಾನ್ನ ಭೋಜನ ಜರುಗಲಿದ್ದು, ಸೆ.30ರಂದು ಬೆಳಿಗ್ಗೆ ದೇವಾಲಯದಲ್ಲಿ ಶ್ರೀ ದುರ್ಗಾ ತ್ರಿಕಾಲ ಪೂಜೆ ಹಾಗೂ ಅ.4ರಂದು ವಿಶೇಷ ಆಯುಧಪೂಜೆ ನಡೆಯಲಿದೆ.

LEAVE A REPLY

Please enter your comment!
Please enter your name here