ಅ.2: ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಭಕ್ತರ ಸಭೆ

0

ಕರಿಕ್ಕಳದ ಶ್ರೀ ಮಹಾವಿಷ್ಣು ದೇವಸ್ಥಾನ ನಿಡ್ವಾಳದಲ್ಲಿ ದೈವಜ್ಞರ ಚಿಂತನೆಯಲ್ಲಿ ಕಂಡುಬಂದಂತೆ ಪೂರ್ವಾಭಿಮುಖವಾಗಿರುವ ದೇವಸ್ಥಾನವನ್ನು ಪಶ್ಚಿಮಾಭಿಮುಖವಾಗಿ ಪುನರ್ ನಿರ್ಮಾಣ ಮಾಡುವ ವಿಚಾರವಾಗಿ ಭಕ್ತರ ಸಭೆಯನ್ನು ಅ.2 ರಂದು ಅಪರಾಹ್ನ 4.ಗಂಟೆಗೆ ದೇವಸ್ಥಾನದ ವಠಾರದಲ್ಲಿ ಕರೆಯಲಾಗಿದೆ. ಕ್ಷೇತ್ರದ ಎಲ್ಲಾ ಭಕ್ತರು ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.