ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ನವರಾತ್ರಿ ಉತ್ಸವಕ್ಕೆ ಚಾಲನೆ

0

ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ನವರಾತ್ರಿ ಉತ್ಸವಗಳು ಇಂದಿನಿಂದ ಅ. 4ರ ವರೆಗೆ ನಡೆಯಲಿದೆ. ಸೆ. 26ರಂದು ಬೆಳಿಗ್ಗೆ ದೀಪೋಜ್ವಲನ ನಡಯುವುದರೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ಅಣ್ಣು ಭಟ್ ದೇವತಾ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲನಗೊಳಿಸಿದರು. ಮೊಕ್ತೇಸರರಾದ ಲಕ್ಷ್ಮೀನಾರಾಯಣ ಶ್ಯಾನುಭಾಗ್, ಬಿ. ಸುರೇಶ್ ಶೆಣೈ ಸೇರಿದಂತೆ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರತೀ ದಿನ ಮಧ್ಯಾಹ್ನ ಉಭಯ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಭೂರಿಭೋಜನ ರಾತ್ರಿ 8.00 ಗಂಟೆಗೆ ಉಭಯ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.