ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮರಿಗೆ ಮಂಗಳೂರು ಒಕ್ಕಲಿಗರ ಸಂಘದಿಂದ ಗೌರವಾರ್ಪಣೆ

0

 

ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ತೀರ್ಥರಾಮ ಎ.ವಿ. ಯವರಿಗೆ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಗೌರವಾರ್ಪಣೆಯನ್ನು ಮಂಗಳೂರು ಹೊಯಿಗೆ ಬಜಾರ್ ನಲ್ಲಿರುವ ನಿಗಮದ ಕಚೇರಿಯಲ್ಲಿ ಗೌರವಿಸಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷರಾದ ಸದಾನಂದ ಗೌಡ ಡಿ.ಪಿ., ಕಾರ್ಯದರ್ಶಿ ಕೆ. ರಾಮಣ್ಣ ಗೌಡ , ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಹಾಗೂ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ನಿರ್ದೇಶಕ ಲೋಕಯ್ಯ ಗೌಡ ಮತ್ತು ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಸುಕುಮಾರ್ ಯು.ಬಿ.ಎಸ್. ಇವರುಗಳು ಉಪಸ್ಥಿತರಿದ್ದರು.