ಪತ್ರಕರ್ತರ ಸಂಘದಿಂದ ಆರೋಗ್ಯ ತಪಾಸಣೆ – ಆಭಾ ಕಾರ್ಡ್ ನೋಂದಣಿ ಶಿಬಿರ

0

 

 

ಪ್ರತೀ ವರ್ಷವೂ ಹೃದಯ ತಪಾಸಣೆ ಅತ್ಯಗತ್ಯ : ಡಾ.ನಂದಕುಮಾರ್ ಸಲಹೆ

ಆಧುನಿಕ ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಕ್ರಮದಿಂದ ಆಗುತ್ತಿರುವ ಬದಲಾವಣೆಯಿಂದಾಗಿ ಹೃದಯ ಸೇರಿದಂತೆ ಆರೋಗ್ಯವನ್ನು ಮೇಲೂ ಪರಿಣಾಮ ಬೀರುತ್ತಿರುತ್ತದೆ. ಹೃದಯದ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತೀ ವರುಷವೂ ತಪಾಸಣೆ ಮಾಡಿಕೊಳ್ಳುವುದು ಅತೀ ಅಗತ್ಯ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ನಂದಕುಮಾರ್ ಸಲಹೆ ನೀಡಿದ್ದಾರೆ.

 

ಸೆ.28 ರಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಗ್ರಾಮ್ ಒನ್ ನಾಗರಿಕಾ ಸೇವಾ ಕೇಂದ್ರ ಅರಂತೋಡು ಇದರ ಆಶ್ರಯದಲ್ಲಿ ಪ್ರೆಸ್ ಕ್ಲಬ್ ಸಹಯೋಗದಲ್ಲಿ ನಡೆದ ಪತ್ರಕರ್ತರ ಆರೋಗ್ಯ ತಪಾಸಣೆ ಹಾಗೂ ಆಭಾ ಕಾರ್ಡ್ ನೋಂದಣಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಒಂದು ದೇಶ ಒಂದು ಕಾರ್ಡ್ ಎನ್ನುವ ನಿಟ್ಟಿನಲ್ಲಿ ಸರಕಾರ ಆಭಾ ಕಾರ್ಡ್ ವ್ಯವಸ್ಥೆ ಜಾರಿಗೊಳಿಸಿದೆ. ಇದನ್ನು ಎಲ್ಲರೂ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಮಿತಿ ಅಧ್ಯಕ್ಷ ಗಂಗಾಧರ್ ಮಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಮಿತಿ ಪ್ರಧಾನ ಕಾರ್ಯದರ್ಶಿ ದುರ್ಗಾಕುಮಾರ್ ನಾಯರ್ ಕೆರೆ ವೇದಿಕೆಯಲ್ಲಿ ಇದ್ದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ ಸ್ವಾಗತಿಸಿದರು.
ಜಿಲ್ಲಾ ಸಂಘದ ಕಾರ್ಯದರ್ಶಿ ಗಂಗಾಧರ್ ಕಲ್ಲಪಳ್ಳಿ
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಕಾರ್ಯಕ್ರಮ ನಿರೂಪಿಸಿದರು.

ಅರಂತೋಡು ಗ್ರಾಮ್ ಒನ್ ಸೇವಾ ಕೇಂದ್ರದ ಮುಖ್ಯಸ್ಥರಾದ ಮಂಜುನಾಥ್ ಪೈ ಅರಂಬೂರು ಆಭಾ ಕಾರ್ಡ್ ನೋಂದಣಿ ವ್ಯವಸ್ಥೆ ನೋಡಿಕೊಂಡರು.