ಕನಕಮಜಲು ಗ್ರಾ.ಪಂ. ಜಮಾಬಂಧಿ

0

 

ಕನಕಮಜಲು ಗ್ರಾಮ ಪಂಚಾಯತಿಯ 2021-22ನೇ ಸಾಲಿನ ವಾರ್ಷಿಕ ಜಮಾಬಂಧಿಯು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಅವರ ಅಧ್ಯಕ್ಷತೆಯಲ್ಲಿ ಸೆ.27ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರುಗಿತು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಅವರು ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು.
ಗ್ರಾಮದಲ್ಲಿ ವಸತಿ ಯೋಜನೆಯ ಪ್ರಗತಿ ಸಾಧನೆ ಮಾಡುವಂತೆ ಇ.ಒ. ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್, ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ಇಬ್ರಾಹಿಂ ಕಾಸಿಂ ಕನಕಮಜಲು, ಶ್ರೀಮತಿ ಸುಮಿತ್ರ ಕುತ್ಯಾಳ, ಶ್ರೀಮತಿ ಶಾರದಾ ಉಗ್ಗಮೂಲೆ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ರವಿಚಂದ್ರ ಕಾಪಿಲ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು.