ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಆರೋಪಿಗೆ ನಿರೀಕ್ಷಣಾ ಜಾಮೀನು

0

 

 

ಅತ್ಯಾಚಾರ ಆರೋಪದಡಿ ಸಿಲುಕಿ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

ದೇವಚಳ್ಳ ಗ್ರಾಮದ ತಳೂರು ಆಚಾರಿಕಾನ ಮನೆ ಎಂಬಲ್ಲಿನ ಪವನ್ ಕುಮಾರ್ ಎಂಬಾತನು ದೇವಚಳ್ಳ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡಿರುವ ವಿವಾಹಿತ ಮಹಿಳೆಯೋರ್ವಳಿಗೆ ಮದುವೆಯಾಗುತ್ತೇನೆ ಎಂದು ನಂಬಿಸಿ ಬಳಿಕ , ಬಲಾತ್ಕಾರವಾಗಿ ಅತ್ಯಾಚಾರವನ್ನು ಎಸಗಿದ್ದಾನೆಂದು ಆರೋಪಿಸಿ, ಮಹಿಳೆಯೊಬ್ಬರು ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿಯವರಿಗೆ ಆರೋಪಿ ಪವನ್ ಕುಮಾರ್ ವಿರುದ್ಧ ನೀಡಿದ ದೂರಿನನ್ವಯ ಆರೋಪಿಯ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪದಡಿ 2022 ಆ.2 ರಂದು ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಮಾಹಿತಿ ದೊರೆತ ಆರೋಪಿಯು ನಿರೀಕ್ಷಣಾ ಜಾಮೀನು ಕೋರಿ ಮಂಗಳೂರಿನ 6 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿಯನ್ನು ದಾಖಲಿಸಿದ್ದರು. ಆರೋಪಿ ಪರ ವಾದವನ್ನು ಆಲಿಸಿದ ನ್ಯಾಯಾಲಯದ ನ್ಯಾಯಧೀಶಾರಾದ ಕಾಂತರಾಜು ಎಸ್. ವಿ ರವರು 2022 ಸೆ.22 ರಂದು ಆರೋಪಿಗೆ ಶರ್ತಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿರುವುದಾಗಿದೆ. ಆರೋಪಿಗಳ ಪರವಾಗಿ ಸುಳ್ಯದ ನ್ಯಾಯವಾದಿ ಗಳಾದ ಯಂ. ವೆಂಕಪ್ಪ ಗೌಡ,ಚಂಪಾ ವಿ. ಗೌಡ, ರಾಜೇಶ್ ಬಿ.ಜಿ., ಶ್ಯಾಮ್ ಪ್ರಸಾದ್ ಹಾಗೂ ಮನೋಜ್ ರವರು ವಕಾಲತ್ತು ವಹಿಸಿದ್ದರು .