ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೋಲಾರ ಜಿಲ್ಲಾ ನಿರ್ದೇಶಕರಾಗಿ ಕರ್ತವ್ಯದಲ್ಲಿದ್ದ ಪದ್ಮಯ್ಯ ಗೌಡ ರವರನ್ನು ಬೆಂಗಳೂರಿನ ಸಾಮಾನ್ಯ ಸೇವಾ ಕೇಂದ್ರ ಕ್ಕೆ ಸಿ.ಎಸ್.ಸಿ. ನಿರ್ದೇಶಕ ರಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಕಚೇರಿ ಹೊಂದಿದ್ದು ಕೇಂದ್ರ ಸರಕಾರದ ಯೋಜನೆಯನ್ನು ರಾಜ್ಯದ 18 ಜಿಲ್ಲೆ ಗಳಲ್ಲಿ ಅನುಷ್ಠಾನ ಮಾಡುವ ಜವಾಬ್ದಾರಿಯನ್ನು ಆಡಳಿತ ಮಂಡಳಿಯು ಅವರಿಗೆ ನೀಡಿರುವುದಾಗಿ ತಿಳಿದು ಬಂದಿದೆ. ರಾಜ್ಯದಲ್ಲಿ ಈಗಾಗಲೇ 10000 ಸಾಮಾನ್ಯ ಸೇವಾ ಕೇಂದ್ರ ತೆರೆಯಲಾಗಿದ್ದು ಮುಂದಿನ ದಿನಗಳಲ್ಲಿ 35000 ಕೇಂದ್ರ ತೆರಯುವ ಹೆಚ್ಚಿನ ಜವಾಬ್ದಾರಿಯನ್ನು ವಹಿಸಲಾಗಿದೆ.