ಕನಕಮಜಲು: ಗಾಂಧಿಜಯಂತಿ ಆಚರಣೆ ಹಾಗೂ ನರೇಗಾ ಯೋಜನೆಯ ವಿಶೇಷ ಗ್ರಾಮಸಭೆ

0

 

ನರೇಗ ಯೋಜನೆ 2023-24ನೇ ಸಾಲಿನ ಕಾಮಗಾರಿ ಗುಚ್ಛ ತಯಾರಿ ಹಾಗೂ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛ ಹಿ ಸೇವಾ ಸ್ವಚ್ಛತೆಯೇ ಸೇವೆ ವಿಶೇಷ ಗ್ರಾಮ ಸಭೆಯು ಕನಕಮಜಲು ಗ್ರಾಮ ಪಂಚಾಯತಿ ಕಛೇರಿಯಲ್ಲಿ ಅ.2ರಂದು ಜರುಗಿತು.
ಗ್ರಾ.ಪಂ‌. ಅಧ್ಯಕ್ಷ ಶ್ರೀಧರ ಕುತ್ಯಾಳ ಅವರು ಅಧ್ಯಕ್ಷತೆ ವಹಿಸಿ, ನರೇಗಾ ಯೋಜನೆ ಹಾಗೂ ಸ್ವಚ್ಛತೆಯ ಕುರಿತು ಮಾಹಿತಿ ನೀಡಿದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ ಅವರು ಸ್ವಚ್ಛತೆಯ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ರವಿಚಂದ್ರ ಕಾಪಿಲ, ಶ್ರೀಮತಿ ಸುಮಿತ್ರ ಕುತ್ಯಾಳ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ಶ್ರೀಮತಿ ಶಾರದಾ ಉಗ್ಗಮೂಲೆ ಸೇರಿದಂತೆ ಗ್ರಾಮದ ನರೇಗಾ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು. ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು.