ಮರ್ಕಂಜ : ಭಾರತೀಯ ಜನತಾ ಪಾರ್ಟಿ, ಸುಳ್ಯ ಮಂಡಲ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆ

0

ಭಾರತೀಯ ಜನತಾ ಪಾರ್ಟಿ ಮರ್ಕಂಜ ಇದರ ವತಿಯಿಂದ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಹಾಗೂ ಕೆ.ವಿ.ಜಿ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇದರ ಸಹಯೋಗದೊಂದಿಗೆ ಅ.02 ರಂದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಜನ್ಮದಿನದಿಂದ ಗಾಂಧೀಜಿಯವರ ಜನ್ಮದಿನದವರೆಗೆ ನಡೆಯುವ ಸೇವಾ ಪಾಕ್ಷಿಕದ ಅಂಗವಾಗಿ ಇಂದು ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಆಯೋಜಿಸಿದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ನೆರವೇರಿಸಿದರು.

 


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಜೆ.ಪಿ.ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ವಹಿಸಿದ್ದರು.
ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಮರ್ಕಂಜ ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ್ ದೇಲಂಪಾಡಿ,ಬಿ.ಜೆ.ಪಿ. ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಮರ್ಕಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪವಿತ್ರ ಗುಂಡಿ,ಕೆ.ವಿ.ಜಿ. ಸಂಸ್ಥೆಯ ವೈದ್ಯಾಧಿಕಾರಿಗಳಾದ ಡಾ.ರಂಗನಾಥ,ಶ್ರೀಮತಿ ವಿಜಯಲಕ್ಷ್ಮೀ,ಮರ್ಕಂಜ ಸ.ಹಿ.ಪ್ರಾ.ಶಾಲೆಯ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಬೊಮ್ಮೆಟ್ಟಿ, ಪ್ರಮುಖರಾದ ಮಹೇಶ್ ಕುಮಾರ್ ಮೇನಾಲ, ಬಿ.ಜೆ.ಪಿ‌. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ,ಕೇಶವ ಅಡ್ತಲೆ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು, ಕೆ.ವಿ.ಜಿ. ಮೆಡಿಕಲ್ ಸಂಸ್ಥೆಯ ವೈದ್ಯಕೀಯ ತಂಡ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕನ್ನಡದ ಪ್ರಸಿದ್ಧ ಟಿವಿ ಚಾನೆಲ್ ಝೀ ಕನ್ನಡ ಆಯೋಜಿಸಿದ ಡಿ.ಕೆ.ಡಿ. – ಡ್ಯಾನ್ಸ್ ಕರ್ನಾಟಕ ರಿಯಾಲಿಟಿ ಶೋನಲ್ಲಿ ಎರಡನೇ ರನ್ನರ್ ಅಪ್ ಸ್ಥಾನ ಪಡೆದ ಮರ್ಕಂಜದ ಪ್ರತಿಭೆ ಪ್ರಣಮ್ಯ ಇವರನ್ನು ಗೌರವಿಸಲಾಯಿತು.