ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

0

 

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಅ.02 ರಂದು ಗಾಂಧಿ ಜಯಂತಿಯ ಅಂಗವಾಗಿ ಹಾಗೂ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದ ಭಾಗವಾಗಿ ಮಹಾತ್ಮಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸ್ವಚ್ಚತಾ ಕಾರ್ಯಕ್ರಮದೊಂದಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಹಾಗೂ ಗ್ರಾಮ ನೈರ್ಮಲ್ಯ ಯೋಜನೆ ಮಂಜೂರಾತಿ, ದೂರ ದೃಷ್ಟಿ ಯೋಜನೆ ಬಗ್ಗೆ ಮಾಹಿತಿ ಹಾಗೂ ನರೇಗಾ ಯೋಜನೆಯ ವಿಶೇಷ ಗ್ರಾಮ ಸಭೆ ನಡೆಸಲಾಯಿತು ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚಿತ್ರಕುಮಾರಿ ಪಾಲಡ್ಕ ವಹಿಸಿದ್ದರು.
ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ವಿದ್ಯಾದರ್, ಜೆಜೆಎಂ ವಿಷಯ ನಿರ್ವಾಹಕರಾದ ಘೋಷಿತ್, ಗ್ರಾಮ ಪಂಚಾಯತ್ ನ ಸದಸ್ಯರು, ಆಶಾ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಹಾಗೂ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.