ಮುಕ್ಕೂರು ಶಾಲೆಯಲ್ಲಿ ಶಾರದಾ ಪೂಜೆ

0

 

ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದಾ ಪೂಜೆ ನೆರವೇರಿತು. ಮುಕ್ಕೂರು ಪತಂಜಲಿ ಶಾಸ್ತ್ರಿ ಪೂಜಾ ವಿಧಿ ವಿಧಾನ ನೆರವೇರಿಸಿದರು.ವಿದ್ಯಾರ್ಥಿಗಳು ಭಜನೆ ಹಾಡಿದರು.

 

ಈ ಸಂದರ್ಭದಲ್ಲಿ ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಜಯಂತ ಕುಂಡಡ್ಕ, ಪ್ರಗತಿಪರ ಕೃಷಿಕರಾದ ನಾಗರಾಜ ಭಟ್ ಕಜೆ, ನಿವೃತ್ತ ಎಂಜಿನಿಯರ್ ಉಮೇಶ್ ರಾವ್ ಕೊಂಡೆಪ್ಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ಶಾಲಾ ಮುಖ್ಯಗುರು ವಸಂತಿ, ಎಸ್ ಡಿಎಂಸಿ ಉಪಾಧ್ಯಕ್ಷೆ ಸುಮತಿ ರೈ, ಸೌಮ್ಯ ಶಾಸ್ತ್ರಿ ಮುಕ್ಕೂರು, ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು, ಕಾರ್ಯದರ್ಶಿ ಶಶಿಕುಮಾರ್ ಬಿ.ಎನ್., ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ ಮೊದಲಾದವರಿದ್ದರು.