ಸುದ್ದಿ ಬಿಡುಗಡೆ ಕಚೇರಿಯಲ್ಲಿ ಆಯುಧ ಪೂಜೆ

0

 

ಸುಳ್ಯದ ಸುದ್ದಿ ಬಿಡುಗಡೆ ಪತ್ರಿಕೆ, ಚಾನೆಲ್ ಕಚೇರಿಯಲ್ಲಿ ಆಯುಧ ಪೂಜೆ ಅ.3 ರಂದು ಸಂಜೆ ನಟರಾಜ ಶರ್ಮರ ಪೌರೋಹಿತ್ಯದಲ್ಲಿ ನಡೆಯಿತು.

 

ಈ ಸಂದರ್ಭದಲ್ಲಿ ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ.ಯು.ಪಿ.ಶಿವಾನಂದ, ಶ್ರೀಮತಿ ಶೋಭಾ ಶಿವಾನಂದ, ಪುತ್ತೂರು ಸುದ್ದಿ ಸಿಇಒ ಸೃಜನ್ ಊರುಬೈಲು, ಬೆಳ್ತಂಗಡಿ ಸುದ್ದಿ ಸಿಇಒ ಕು.ಸಿಂಚನಾ ಊರುಬೈಲು, ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ವರದಿಗಾರ ಹರೀಶ್ ಬಂಟ್ವಾಳ್, ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಹಾಗೂ ಸಿಬ್ಬಂದಿಗಳಿದ್ದರು.