ಕೆ.ವಿ.ಜಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯುಧ ಪೂಜೆ ಆಚರಣೆ

0

 

ನವರಾತ್ರಿ ಮತ್ತು ವಿಜಯದಶಮಿ ಪ್ರಯುಕ್ತ ಅಕ್ಟೋಬರ್ 04ರಂದು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹಾಗೂ ಕೆವಿಜಿ ಆಯುರ್ವೇದ ಫಾರ್ಮ ಮತ್ತು ರಿಸರ್ಚ್ ಸೆಂಟರ್ ನಲ್ಲಿ ಆಯುಧ ಪೂಜೆ ಆಚರಣೆ ಮಾಡಲಾಯಿತು.


ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ
ಡಾ. ಕೆ. ವಿ. ಚಿದಾನಂದ,
ಶ್ರೀ. ಹೇಮನಾಥ ಕೆ. ವಿ., ಕೆ.ವಿ.ಜಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ
ಪ್ರಾಂಶುಪಾಲರಾದ ಪ್ರೊಫೆಸರ್ ಡಾ.ಲೀಲಾಧರ ಡಿ.ವಿ, ಕಾಲೇಜಿನ ಭೋದಕ ಬೋದಕೇತರ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಿರಿಯ ವೈದ್ಯರು, ಆಸ್ಪತ್ರೆಯ ಶುಶ್ರೂಷಾ ವರ್ಗದ ಸಿಬ್ಬಂದಿ, ಕಲಿಕಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದೇ ಸಂಧರ್ಭದಲ್ಲಿ ಕೆ.ವಿ.ಜಿ. ಆಯುರ್ವೇದ ಫಾರ್ಮ ಮತ್ತು ರಿಸರ್ಚ್ ಸೆಂಟರ್ ನಲ್ಲಿ ಕೂಡ ಪ್ರೊಫೆಸರ್ ಡಾ. ಪುರುಷೋತ್ತಮ ಕೆ.ಜಿ. ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಆಯುಧ ಪೂಜೆಯನ್ನು ಆಚರಿಸಿದರು.
ಈ ಸಂದರ್ಭದಲ್ಲಿ ವಾಹನ ಪೂಜೆ ಕಾರ್ಯಕ್ರಮ ಕೂಡ ನೆರವೇರಿಸಲಾಯಿತು.