ಸ್ಕೂಟಿಗೆ ಮಾರುತಿ ಕಾರು ಡಿಕ್ಕಿ : ಶಾಲಾ ವಿದ್ಯಾರ್ಥಿ ಮೃತ್ಯು

0

ಸ್ಕೂಟಿಗೆ ಮಾರುತಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಕಾಲೇಜು ವಿದ್ಯಾರ್ಥಿ ಮೃತಪಟ್ಟು, ಆತನ ಸಹೋದರಿ ಗಂಭೀರ ಗಾಯಗೊಂಡ ಘಟನೆ ಎಲಿಮಲೆಯಲ್ಲಿ ನಡೆದಿದೆ.

 

ಎಲಿಮಲೆ ಮತ್ತು ಜಬಳೆ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಚಲಾಯಿಸುತ್ತಿದ್ದ ಸ್ಕೂಟಿಗೆ ಮಾರುತಿ 800 ಕಾರೊಂದು ಡಿಕ್ಕಿ ಹೊಡೆಯಿತು. ಗಂಭೀರವಾಗಿ ಗಾಯಗೊಂಡ ನಿಶಾಂತ್‌ನನ್ನು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಸ್ಕೂಟಿಯಲ್ಲಿದ್ದ ಆತನ ಸಹೋದರಿ ಮೋಕ್ಷಾಳಿಗೆ ಗಂಭೀರ ಗಾಯಗಳಾಗಿವೆ. ಮೃತ ನಿಶಾಂತ್ ಸುಳ್ಯ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ.