ದರ್ಖಾಸ್ತು ಶ್ರೀ ಶಾರದಾಂಬಾ ಸೇವಾ ಸಮಿತಿ ವತಿಯಿಂದ ಶ್ರೀ ಶಾರದೋತ್ಸವ

0

 

ವಿಗ್ರಹ ಪ್ರತಿಷ್ಠೆ, ಗಣಪತಿ ಹೋಮ,ಭಜನಾ ಕಾರ್ಯಕ್ರಮ

ಶ್ರೀ ಶಾರದಾಂಬಾ ಸೇವಾ ಸಮಿತಿ ದರ್ಖಾಸ್ತು ವತಿಯಿಂದ 17 ನೇ ವರ್ಷದ ಶ್ರೀ ಶಾರದೋತ್ಸವವು ಅ.04 ರಂದು ದರ್ಖಾಸ್ತು ಶಾಲಾ ಅಕ್ಷಯ ರಂಗಮಂದಿರದಲ್ಲಿ ಪ್ರಾರಂಭಗೊಂಡಿತು.

ಬೆಳಿಗ್ಗೆ ಶ್ರೀ ಶಾರದಾ ವಿಗ್ರಹ ಪ್ರತಿಷ್ಠೆ, ಗಣಪತಿ ಹೋಮ ನಡೆಯಿತು.
ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಮುಳಿಯಾರು ಬೋವಿಕಾನ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.

 

ಈ ಸಂದರ್ಭದಲ್ಲಿ ಶ್ರೀ ಶಾರದಾಂಭ ಸೇವಾ ಸಮಿತಿಯ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ದರ್ಖಾಸ್ತು, ಅಧ್ಯಕ್ಷ ಚಂದ್ರಶೇಖರ ದರ್ಖಾಸ್ತು, ಕಾರ್ಯದರ್ಶಿ ವೆಂಕಟ್ರಮಣ ಚೂಂತಾರು, ಜತೆ ಕಾರ್ಯದರ್ಶಿ ಹೊನ್ನಪ್ಪ ದರ್ಖಾಸ್ತು, ಖಜಾಂಜಿ ಚೆನ್ನಪ್ಪ ಗೌಡ ಕಾವಿನಮೂಲೆ, ಉಪಾಧ್ಯಕ್ಷ ಕಂದಸ್ವಾಮಿ ದರ್ಖಾಸ್ತು, ಗೌರವ ಸಲಹೆಗಾರರಾದ ಗಂಗಾಧರ ರೈ ಪುಡ್ಕಜೆ, ನಿರ್ದೇಶಕರು ಮತ್ತು ಸರ್ವಸದಸ್ಯರು, ದರ್ಖಾಸ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕ ವೃಂದದವರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಗಂಟೆ 3.30 ರಿಂದ 4.30ರವರೆಗೆ ವಾಹನ ಪೂಜೆ ನಡೆಯಲಿದೆ.
ಸಂಜೆ ಗಂಟೆ 3.30 ರಿಂದ ದರ್ಖಾಸ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಂಜೆ ಗಂಟೆ 6.00 ರಿಂದ ಶಾರದಾಂಬೆಯ ವೈಭವದ ಶೋಭಾಯಾತ್ರೆ ನಡೆದು ಪುಡ್ಕಜೆ ಹೊಳೆಯದಲ್ಲಿ ವಿಸರ್ಜನೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ದರ್ಖಾಸ್ತು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here