ಜಯನಗರ : ವಿಕ್ರಮ ಯುವಕ ಮಂಡಲದಲ್ಲಿ ಉಚಿತ ಅಭಾ ಕಾರ್ಡ್ ನೋಂದಣಿ ಶಿಬಿರ

0

 

ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಅರಂತೋಡು, ವಿಕ್ರಮ ಯುವಕ ಮಂಡಲ ಜಯನಗರ, ಸುದ್ದಿ ಸಮೂಹ ಮಾಧ್ಯಮ ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಉಚಿತ ಆಯುಷ್ಮಾನ್ ಆ ಭಾ ಕಾರ್ಡ್ ನೊಂದಣಿ ಶಿಬಿರ ಇಂದು ಜಯನಗರ ವಿಕ್ರಮ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು.

ಸುಳ್ಯ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ ನಂದಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆ ಭಾ ಕಾರ್ಡ್ ಯೋಜನೆಯ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ಸ್ಥಳೀಯ ನಗರ ಪಂಚಾಯತ್ ಸದಸ್ಯೆ ಶಿಲ್ಪಾ ಸುದೇವ್, ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ, ಜಯನಗರ ಶ್ರೀ ಗಜಾನನ ಭಜನಾ ಮಂದಿರ ಇದರ ಅಧ್ಯಕ್ಷ ಮಾಧವ ಪಾಟಾಳಿ, ಉಪಸ್ಥಿತರಿದ್ದರು.
ಯುವಕ ಮಂಡಲದ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಎ ಎಂ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಈ ಸಂದರ್ಭದಲ್ಲಿ ವಿಕ್ರಮ ಯುವಕ ಮಂಡಲದ ಸದಸ್ಯರು, ಮಾಜಿ ಅಧ್ಯಕ್ಷರುಗಳು, ಸುದ್ದಿ ಸಂಸ್ಥೆಯ ಸಿಬ್ಬಂದಿಗಳು, ಸ್ಥಳೀಯರು ಭಾಗವಹಿಸಿದ್ದರು.