ಅಮರಮುಡ್ನೂರು ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಮಿಕರಿಗೆ, ಸಂಜೀವಿನಿ ಪದಾಧಿಕಾರಿಗಳಿಗೆ ಸನ್ಮಾನ

0

 

ಅಮರಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚತಾಹೀ ಸೇವಾ ಮತ್ತು ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಪಂಚಾಯತ್ ಸ್ವಚ್ಚ ಸಂಕೀರ್ಣ ಘಟಕದ ಕಾರ್ಮಿಕರನ್ನು ಹಾಗೂ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

ಪಂಚಾಯತ್ ಅಧ್ಯಕ್ಷೆ ಪದ್ಮ ಪ್ರಿಯಾ ಮೇಲ್ತೋಟ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಪಂಚಾಯತ್ ಸದಸ್ಯರು ಹಾಗೂ ಪಿ.ಡಿ.ಒ ಆಕಾಶ್ ಮತ್ತು ಸಿಬ್ಬಂದಿ ವರ್ಗದ ವರು, ಆಶಾ ಕಾರ್ಯಕರ್ತೆ ಯರು,ಆರೋಗ್ಯ ಸಹಾಯಕಿಯರು ಉಪಸ್ಥಿತರಿದ್ದರು.