ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಸಾಮೂಹಿಕ ಕುಂಕುಮಾರ್ಚನೆ

0

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ
ದುರ್ಗಾಷ್ಠಮಿ ದಿನವಾದ ಅ.3 ರಂದು ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು. ಶ್ರೀ ದೇವಳದ ಪುರೋಹಿತರಾದ ಪ್ರಸನ್ನ ಹೊಳ್ಳ ಕುಂಕುಮಾರ್ಚನೆ ನೆರವೇರಿಸಿದರು. ಪುರೋಹಿತರಾದ ರಾಮಕೃಷ್ಣ ಭಟ್, ಸುದೀರ್ ಭಟ್, ಸುದರ್ಶನ ಶಾಸ್ತ್ರಿ ಸಹಕರಿಸಿದರು.

ಶ್ರೀ ದೇವಳದ ಶೃಂಗೇರಿ ಮಠದಲ್ಲಿ ಸಾಮೂಹಿಕ ಕುಂಕುಮಾರ್ಚನೆ ನೆರವೇರಿತು. ಆರಂಭದಲ್ಲಿ ಸಂಕಲ್ಪ ನೆರವೇರಿಸಿದ ಪುರೋಹಿತರು ಬಳಿಕ ಶ್ರೀ ದೇವಿಗೆ ಕುಂಕುಮಾರ್ಚನೆ ಸಮರ್ಪಿಸಿ ಪೂಜೆ ನೆರವೇರಿಸಿದರು ಬಳಿಕ ಪ್ರಸಾದ ವಿತರಿಸಿದರು.
ಈ ಸಂದರ್ಭ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ವನಜಾ ವಿ ಭಟ್, ಶೋಭಾ ಗಿರಿಧರ್, ಪಿ.ಜಿ.ಎಸ್.ಎನ್ ಪ್ರಸಾದ್, ಮನೋಹರ ರೈ, ಲೋಕೇಶ್ ಮುಂಡೊಕಜೆ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಚಂದ್ರಶೇಖರ ಮರ್ದಾಳ, ಮನೋಜ್ ಸುಬ್ರಹ್ಮಣ್ಯ, ಚಂದ್ರಶೇಖರ ನಲ್ಲೂರಾಯ, ಕಿಶೋರ್ ಕೂಜುಗೋಡು, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಶ್ರೀ ದೇವಳದ ಸಿಬ್ಬಂದಿ ಗಳು, ಭಕ್ತರು, ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಸಿಬ್ಬಂದಿಗಳು ಭಾಗವಹಿಸಿದ್ದರು.