ಐನೆಕಿದು ಎಂಬಲ್ಲಿ ನದಿಯ ಸೇತುವೆ ಕೆಳಗೆ ದನದ ತಲೆ ಮತ್ತು ತ್ಯಾಜ್ಯ ಗಳನ್ನು ಗೋಣಿ ಚೀಲದಲ್ಲಿ ತುಂಬಿ ನದಿಯ ನೀರಿಗೆ ಯಾರೋ ಕಿಡಿಗೇಡಿಗಳು ಎಸೆದಿರುವ ಬಗ್ಗೆ ವರದಿಯಾಗಿದ್ದು ಇದನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸುತ್ತಿದೆ. ಪ್ರಕರಣದ ಬಗ್ಗೆ ಸುಬ್ರಹ್ಮಣ್ಯ ಪೋಲಿಸರಿಗೆ ದೂರು ನೀಡಲಾಗಿದ್ದು ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆಯು ಆಗ್ರಹಿಸುತ್ತದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.