ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ನಿಂತಿಕಲ್ಲು ವಲಯದ ಮುರುಳ್ಯ ಕಾರ್ಯಕ್ಷೇತ್ರದಲ್ಲಿ ಡಿಜಿಟಲ್ ಸೇವಾ ಕೇಂದ್ರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಕು. ಜಾನಕಿ ಅ. 13ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆ ಸದಸ್ಯರಾದ ವಸಂತ ನಡುಬೈಲು ಮತ್ತು ಭಾಗೀರಥಿ ಮುರುಳ್ಯ ಉಪಸಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ನಿಂತಿಕಲ್ಲು ವಲಯದ ಅಧ್ಯಕ್ಷರಾದ ವಸಂತ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯೋಜನೆ ಬಗ್ಗೆ ಮಾಹಿತಿಯನ್ನು ವಲಯ ಮೇಲ್ವಿಚಾರಕಿ ಉಷಕಲ್ಯಾಣಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಪ್ರಶಾಂತ್, ಮುರುಳ್ಯ ಒಕ್ಕೂಟದ ಅಧ್ಯಕ್ಷರಾದ ಪದ್ಮನಾಭ ಪೂದೆ, ಅಲೆಕ್ಕಾಡಿ ಒಕ್ಕೂಟದ ಅಧ್ಯಕ್ಷರಾದ ಶೂರಪ್ಪ ಹಾಗೂ ಎರಡು ಒಕ್ಕೂಟದ ಪದಾಧಿಕಾರಿಯವರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಶಶಿಕಲ ಸ್ವಾಗತಿಸಿದರು.