ಕನಕಮಜಲು ಸಹಕಾರಿ ಸಂಘದ ಶತಮಾನೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ

0

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವದ ಪ್ರಯುಕ್ತ ಶತಮಾನೋತ್ಸವ ಸಲಹಾ ಸಮಿತಿ ಹಾಗೂ ಜಾಲ್ಸೂರು, ಕನಕಮಜಲು ಗ್ರಾಮದ ಸಹಕಾರಿ ಬಂಧುಗಳ ಪೂರ್ವಭಾವಿ ಸಭೆಯು ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಅ.14ರಂದು ಜರುಗಿತು.


ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅವರು ಅಧ್ಯಕ್ಷತೆ ವಹಿಸಿದ್ದರು. ಶತಮಾನೋತ್ಸವ ಸಮಿತಿ ಗೌರವ ಸಲಹೆಗಾರ ನ.ಸೀತಾರಾಮ, ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳಾದ ಕರುಣಾಕರ ರೈ ಕುಕ್ಕಂದೂರು, ಗಣೇಶ್ ಅಂಬಾಡಿಮೂಲೆ, ಶ್ರೀಮತಿ ಭಾರತಿ ಕಜೆಗದ್ದೆ, ಶ್ರೀಮತಿ ಪ್ರೇಮಲತಾ ಪಲ್ಲತ್ತಡ್ಕ, ಸಹಕಾರಿ ಸಂಘದ ಕಾನೂನು ಸಲಹೆಗಾರರುಗಳಾದ ದೇವಿಪ್ರಸಾದ್ ಆಳ್ವ, ಚಂದ್ರಶೇಖರ ಸೇರಿದಂತೆ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳು, ಮಾಜಿ ಉಪಾಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು ಹಾಗೂ ಜಾಲ್ಸೂರು, ಕನಕಮಜಲು ಗ್ರಾಮದ ಸಹಕಾರಿಬಂಧುಗಳು ಉಪಸ್ಥಿತರಿದ್ದರು.