ಕೊಡಗು ಜಿಲ್ಲಾಡಳಿತ, ಕೊಡಗು ಜಿ.ಪಂ., ಆಯುಷ್ ಇಲಾಖೆ ಹಾಗೂ ನೀಮಾ ಕೊಡಗು ಇವರ ಆಶ್ರಯದಲ್ಲಿ ಅ.23 ರಂದು ಮಡಿಕೇರಿಯಲ್ಲಿ ನಡೆಯುವ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ ಕೊಡ ಮಾಡುವ ‘ಆಯುರ್ವೇದ ಡೇ ಅವಾರ್ಡ್ -2022’ ಕ್ಕೆ ಸುಳ್ಯ ಕೆ.ವಿ.ಜಿ. ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿರುವ ಡಾ.ಲೀಲಾಧರ್ ಡಿ.ವಿ. ಭಾಜನರಾಗಿದ್ದಾರೆ.
ಅ.23 ರಂದು ಮಡಿಕೇರಿಯ ಕೆಳಗಿನ ಗೌಡ ಸಮಾಜ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಸಮಾರಂಭದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ.