ಪಂಜದಲ್ಲಿ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ -ಉದ್ಘಾಟನೆ

0

 

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವಿಶೇಷ ಕಾರ್ಯಕಾರಿಣಿ ಸಭೆ ಅ.29ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಲೇಗ ಪೂವಣಿ ಹೆಗ್ಡೆ ಸಭಾಭವನದಲ್ಲಿ ನಡೆಯಿತು.

 

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಉದ್ಘಾಟಿಸಿ ಮಾತನಾಡಿದರು.ಸುಳ್ಯ ಭಾಜಪಾ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಸಭಾಧ್ಯಕ್ಷತೆ ವಹಿಸಿದ್ದರು.

 

ಭಾಜಪಾ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸುಭೋದ್ ಶೆಟ್ಟಿ ಮೇನಾಲ ಸ್ವಾಗತಿಸಿದರು.

ರಾಕೇಶ್ ರೈ ಕೆಡೆಂಜಿ ನಿರೂಪಿಸಿದರು.ಸುಬ್ರಹ್ಮಣ್ಯ ಕುಳ ವಂದಿಸಿದರು.