ಬೆಳ್ಳಾರೆ : ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದ ಆಮಂತ್ರಣ ಬಿಡುಗಡೆ

0

ದ.ಕ.ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವರ ಸಹಯೋಗದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟವು ನ.08 ಮತ್ತುನ. 09 ರಂದು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರ ಬಿಡುಗಡೆಯು ಅ.29 ರಂದು ನಡೆಯಿತು.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್.ಪಿ.ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.

 


ಈ ಸಂದರ್ಭದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ವಿಶ್ವನಾಥ ಗೌಡ ಪಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ, ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಉಮಾಕುಮಾರಿ,ಮುಖ್ಯ ಶಿಕ್ಚಕ ಮಾಯಿಲಪ್ಪ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪುಷ್ಪಾವತಿ, ಪ್ರದೀಪ್ ಕುಮಾರ್ ರೈ ಪನ್ನೆ, ಮುರಳಿ ತಡಗಜೆ,ಶಾಲಾ ಕಟ್ಟಡ ಸಮಿತಿ ಅಧ್ಯಕ್ಷ ಹರ್ಷ ಜೆ,ಶರತ್ ರಾವ್ ಪೂಗವನ, ಶಮಿನಾಭಾನು, ಜಯರಾಮ ಉಮಿಕ್ಕಳ, ಹರ್ಷ ಜೆ, ಕನ್ನದಾಸನ್,ಆರೀಫ್ ಬೆಳ್ಳಾರೆ, ನಾಗೇಶ ಕುಲಾಲ್, ರೇವತಿ ದೇವರಕಾನ ಮತ್ತಿತರರು ಉಪಸ್ಥಿತರಿದ್ದರು.