ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜಾತ್ರೋತ್ಸವ ಬಗ್ಗೆ ಪೂರ್ವಭಾವಿ ಸಭೆ

0

 

ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಕಾರ್ಯಕ್ರಮಗಳು ನ. 28ರಿಂದ ಜರಗಲಿದ್ದು ಈ ಬಗ್ಗೆ ಪೂರ್ವಭಾವಿ ಸಭೆ ಅ. 30ರಂದು ದೇವಸ್ಥಾನದ ಆವರಣದಲ್ಲಿ ನಡೆಯಿತು.

ವೇದಿಕೆಯಲ್ಲಿ ದೇವಳದ ಗೌರವ ಪ್ರಧಾನ ಅರ್ಚಕರಾದ ವಾರಣಾಶಿ ಗೋಪಾಲಕೃಷ್ಣ, ಧರ್ಮದರ್ಶಿಗಳಾದ ನರಸಿಂಹ ಭಟ್ಟ ಕೆದಿಲ, ಸೀತಾರಾಮ ಕೋಟೆ ಉಪಸ್ಥಿತರಿದ್ದರು. ಸಭೆಯಲ್ಲಿ ಜಾತ್ರೋತ್ಸವದ ಬಗ್ಗೆ ಚರ್ಚಿಸಲಾಯಿತು. ನೂತನ ಕಾರ್ಯಕಾರಿ ಸಮಿತಿಯನ್ನು ಈ ಸಂದರ್ಭದಲ್ಲಿ ರಚಿಸಲಾಯಿತು.