ಕನಕಮಜಲು: ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಮೃತ್ತಿಕೆ ಸಂಗ್ರಹ ರಥಕ್ಕೆ ಸ್ವಾಗತ

0

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣದ ಅಂಗವಾಗಿ ಮೃತ್ತಿಕೆ ಸಂಗ್ರಹ ರಥವನ್ನು ಕನಕಮಜಲು ಗ್ರಾಮ ಪಂಚಾಯತಿ ವತಿಯಿಂದ ನ.2ರಂದು ಸ್ವಾಗತಿಸಲಾಯಿತು.


ಗ್ರಾಮ ಪಂಚಾಯತ್ ವತಿಯಿಂದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಅಂಗವಾಗಿ ಆಗಮಿಸಿದ ರಥಕ್ಕೆ ಶ್ರೀ ಆತ್ಮಾರಾಮ ಭಜನಾ ಮಂದಿರದ ವಠಾರದಿಂದ ಮೃತ್ತಿಕೆ ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಕಾರ್ಯದರ್ಶಿ ರಮೇಶ್ ಟಿ., ಗ್ರಾ.ಪಂ. ಸಿಬ್ಬಂದಿಗಳು ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ. ಭವಾನಿ ಡಿ. ತಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಹೇಮಂತ್ ಮಠ ಶ್ರೀ ಆತ್ಮಾರಾಮ ಭಜನಾ ಮಂದಿರ ದ ಮಾಜಿ ಅಧ್ಯಕ್ಷ ಜಗನ್ನಾಥ ಕಾಪಿಲ, ಕನಕಮಜಲು ಪ್ರಾ.ಕೃ.ಪ.ಸಹಕಾರಿ ಸಂಘದ ಉಪಾಧ್ಯಕ್ಷ ನಾರಾಯಣ ಬೋಮ್ಮೆಟ್ಟಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.