ನಾಳೆ ಗುತ್ತಿಗಾರಿನಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ಹಾಗೂ ನಿರ್ವಹಣೆ ಬಗ್ಗೆ ಮಾಹಿತಿ

0

 

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ತೋಟಗಾರಿಕಾ ಇಲಾಖೆ, ಪರಿವಾರ ಪಂಜ ರೈತ ಉತ್ಪಾದಕ ಕಂಪೆನಿ. ಲಿ ಸಹಯೋಗದಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ಹಾಗೂ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ನ.5 ರಂದು ಸೊಸೈಟಿಯಾ ದೀನ್ ದಯಾಳ್ ರೈತ ಸಭಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ವಿಟ್ಲ ಸಿ ಪಿ ಸಿ ಆರ್ ಐ ನ ವಿಜ್ಞಾನಿ ಡಾ.ಭವಿಷ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ಸೊಸೈಟಿಯ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಹೆಚ್ಚಿನ ಕೃಷಿಕರು ಭಾಗವಹಿಸುವಂತೆ ಕೋರಲಾಗಿದೆ.