ಐವರ್ನಾಡಿನಲ್ಲಿ ಯು.ಡಿ.ಶೇಖರ್ ರವರಿಗೆ ಶ್ರದ್ಧಾಂಜಲಿ ಸಭೆ

0

ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ದುಡಿದವರು ಯು.ಡಿ.ಶೇಖರ್ – ಎಸ್.ಎನ್. ಮನ್ಮಥ

ಗ್ರಾಮ ಪಂಚಾಯತ್ ಐವರ್ನಾಡು ಮತ್ತು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವತಿಯಿಂದ ಯು.ಡಿ.ಶೇಖರ್ ರವರಿಗೆ ಶ್ರದ್ಧಾಂಜಲಿ ಸಭೆಯು ಗ್ರಾಮ ಪಂಚಾಯತ್ ಗ್ರಾಮವಿಕಾಸ ಸಭಾ ಭವನದಲ್ಲಿ ನ.06 ರಂದು ನಡೆಯಿತು.
ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ಮಾತನಾಡಿ ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಕಳೆದ 8 ವರ್ಷಗಳಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಸಂದರ್ಭದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಯು.ಡಿ.ಶೇಖರ್ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಹಗಲಿರುಳು ದುಡಿದಿದ್ದಾರೆ.ಇವರು ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು ಎಂದು ಹೇಳಿ ನುಡಿನಮನ ಸಲ್ಲಿಸಿದರು.


ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ದಿನೇಶ್ ಮಡ್ತಿಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್, ಶಾಂತಾರಾಮ ಕಣಿಲೆಗುಂಡಿ,ಶಿವರಾಮ ಗೌಡ ನೆಕ್ರೆಪ್ಪಾಡಿ,ಪಂಚಾಯತ್ ಸಿಬ್ಬಂದಿ ಚೋಮ ರವರು ಯು.ಡಿ.ಶೇಖರ್ ಬಗ್ಗೆ ಗುಣಗಾನಗೈದು ನುಡಿನಮನ ಸಲ್ಲಿಸಿದರು.
ಮೃತರ ಆತ್ಮಕ್ಕೆ ಶಾಂತಿಕೋರಿ ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಲಾಯಿತು.
ಸಭೆಯಲ್ಲಿದ್ದ ನೂರಾರು ಜನರು ಯು.ಡಿ.ಶೇಖರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.