ಬಾಳಿಲ ಶಾರದೋತ್ಸವ ಸಮಿತಿ ಸಭೆ, ವಿಠಲ ಬಾರ್ಬರ್ ರಿಗೆ ಶ್ರದ್ಧಾಂಜಲಿ

0

ಸಾರ್ವಜನಿಕರ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಆಶ್ರಯದಲ್ಲಿರುವ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸಭೆ ನ. 6ರಂದು ಮುಪ್ಪೇರ್ಯದ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದ ವಠಾರದಲ್ಲಿ ಸಮಿತಿಯ ಅಧ್ಯಕ್ಷ ಶೇಷಪ್ಪ ಪರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಶಾರದೋತ್ಸವ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದ ವಿಠಲ ಬಾರ್ಬರ್ ರಿಗೆ ಈ ಸಂದರ್ಭದಲ್ಲಿ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಮಿತಿಯ ಗೌರವಾಧ್ಯಕ್ಷ ರಾಧಾಕೃಷ್ಣ ರಾವ್ ಯು, ಕಾರ್ಯಾಧ್ಯಕ್ಷ ಸುಧಾಕರ ರೈ ಎ.ಎಂ, ಸಮಿತಿಯ ಗೌರವ ಸಲಹೆಗಾರರಾದ ಎ.ಕೆ. ನಾಯ್ಕ್ ಅಮೆಬೈಲು, ಅಶೋಕ್ ರೈ ಅರ್ಚನಾ, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಕಮಲ ಎಂ, ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಸಭೆಯಲ್ಲಿ ಹಾಜರಿದ್ದು, ಸಲಹೆ ಸೂಚನೆಗಳನ್ನು ನೀಡಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ ಅಯ್ಯನಕಟ್ಟೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.