ಜೇಸಿಐ ಪಂಜ ಪಂಚಶ್ರೀ ರಜತ ರಶ್ಮಿ ಸಂಭ್ರಮ-ಕ್ರಿಕೆಟ್ ಪಂದ್ಯಾಟ ಸಮಾರೋಪ
🔹 ಕುಕ್ಕೆ ಸಿಕ್ಸರ್ ಸುಬ್ರಹ್ಮಣ್ಯ ಪ್ರಥಮ- ಬೆದ್ರ ಪ್ರೆಂಡ್ಸ್ ದ್ವಿತೀಯ

0

ಜೇಸಿಐ ಪಂಜ ಪಂಚಶ್ರೀ ಇದರ ಬೆಳ್ಳಿ ಹಬ್ಬ-‘ರಜತ ರಶ್ಮಿ’ ಪ್ರಯುಕ್ತ
ನ.9 ರಂದು ಸಂಜೆ ಕ್ರಿಕೆಟ್ ಪಂದ್ಯಾಟ ಸಮಾರೋಪ ಸಮಾರಂಭವು ಪಂಜ ಸರಕಾರಿ ಪದವಿ ಪೂರ್ವ ಕಾಲೇಜು ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿದಲ್ಲಿ ನಡೆಯಿತು. ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಶಿವಪ್ರಸಾದ್ ಹಾಲೆಮಜಲು ಸಭಾಧ್ಯಕ್ಷತೆ ವಹಿಸಿದ್ದರು.ಬಹುಮಾನ ವಿತರಣೆ ನೆರವೇರಿಸಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಭರತ್ ಮುಂಡೋಡಿ ಮಾತನಾಡಿ
“ಜೇಸಿಯು ಅನೇಕ ನಾಯಕರನ್ನು ಈ ಸಮಾಜಕ್ಕೆ ನೀಡಿದೆ.ಅದೇ ರೀತಿ ಜೇಸಿಐ ಪಂಜ ಪಂಚಶ್ರೀ ಅನೇಕ ನಾಯಕರ ನೀಡಿ .ಅವರಿಂದ ಸಮಾಜಕ್ಕೆ ಕೊಡುಗೆಗಳು ದೊರೆಯುತ್ತಿದೆ ” ಎಂದು ಅವರು ಹೇಳಿದರು.


ರಾಷ್ಟ್ರೀಯ ಕ್ರೀಡಾ ತರಬೇತುದಾರ ಬಿ.ಕೆ ಮಾಧವ ಗೌಡ ಬೇರ್ಯ
ಮಾತನಾಡಿ “ಶಾಂತಿ , ಸೌಹಾರ್ದ ಬದುಕಿಗೆ ಕ್ರೀಡಾ ಕೂಟಗಳು ಪೂರಕ . ಆರೋಗ್ಯಕರ ಜೀವನಕ್ಕೆ ಕ್ರೀಡೆಗಳು ಬಹಳಷ್ಟು ಸಹಕಾರಿ ಆಗುತ್ತದೆ ಎಂದು ಅವರು ಹೇಳಿದರು.
ಜಿಲ್ಲಾ ಲಯನ್ಸ್ ನಿಕಟ ಪೂರ್ವ ಸಾರ್ವಜನಿಕ ಸಂಪರ್ಕ ಅಧಿಕಾರಿ ಜಯರಾಮ್ ದೇರಪ್ಪಜ್ಜನ ಮನೆ ಶುಭ‌ ಹಾರೈಸಿದರು .ಗುತ್ತಿಗಾರು ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಮಾಧವ ಎರ್ದಡ್ಕ
ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ಮತ್ತು ಘಟಕದ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ಕಾರ್ಯಕ್ರಮ ಸಂಯೋಜಕ, ಬೆಳ್ಳಿ ‌ಹಬ್ಬ ಸಮಿತಿಯ ಕಾರ್ಯದರ್ಶಿ ತೀರ್ಥಾನಂದ ಕೊಡೆಂಕಿರಿ, ಕಾರ್ಯಕ್ರಮ ನಿರ್ದೇಶಕ ಲೋಕೇಶ್ ಆಕ್ರಿಕಟ್ಟೆ, ಘಟಕದ ಕಾರ್ಯದರ್ಶಿ ಕೌಶಿಕ್ ಕುಳ , ಕ್ರಿಕೆಟ್ ಪಂದ್ಯಾಟ
ಕಾರ್ಯಕ್ರಮ ಸಂಯೋಜಕ ವಿನ್ಯಾಸ ಕೊಚ್ಚಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ
ವಾಸುದೇವ ಮೇಲ್ಪಾಡಿ ವೇದಿಕೆಗೆ ಆಹ್ವಾನಿಸಿದರು. ವಾಚಣ್ಣ ಕೆರೆಮೂಲೆ ಜೇಸಿವಾಣಿ ನುಡಿದರು.ಲೋಕೇಶ್ ಆಕ್ರಿಕಟ್ಟೆ ಸ್ವಾಗತಿಸಿದರು.ಸೋಮಶೇಖರ ನೇರಳ ವಂದಿಸಿದರು.‌ಸುಕುಮಾರ ಕಂದ್ರಪಾಡಿ ಬಹುಮಾನ ವಿಜೇತರ ಪಟ್ಟಿಯಾಚಿಸಿದರು.
ಫಲಿತಾಂಶ : ಕರ್ನಾಟಕ ಮತ್ತು ಕೇರಳದ ರಾಜ್ಯಗಳ ಬಲಿಷ್ಠ ಒಟ್ಟು 20 ಆಹ್ವಾನ ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿತ್ತು.
ಕುಕ್ಕೆ ಸಿಕ್ಸರ್ ಸುಬ್ರಹ್ಮಣ್ಯ ಪ್ರಥಮ ಸ್ಥಾನ ಗಳಿಸಿ ರೂ.30000ನಗದು ಮತ್ತು ಶಾಶ್ವತ ರಜತ ಟ್ರೋಫಿ, ದ್ವಿತೀಯ ಸ್ಥಾನ ಗಳಿಸಿದ ಬೆದ್ರ‌ ಪ್ರೆಂಡ್ಸ್ ಮಂಗಳೂರು ದ್ವಿತೀಯ ಗಳಿಸಿ ರೂ.20000 ಮತ್ತು ರಜತ‌ ಟ್ರೋಫಿ , ಸೆಮಿ ಫೈನಲ್ ನಲ್ಲಿ ನಿರ್ಗಮಿತ ತಂಡಗಳಾದ ಯುವ ಶಕ್ತಿ ನಾವೂರು ಮತ್ತು ರಿಶೀಂಗ್ ಸ್ಟಾರ್ ಮಂಗಳೂರು ತಂಡಗಳು ರಜತ ಟ್ರೋಫಿ ಮತ್ತು ತಲಾ ರೂ.3000 ಬಹುಮಾನ ಪಡೆಯಿತು. ಉತ್ತಮ ಆಟಗಾರನ್ನು ಗುರುತಿಸಿ ಪಂದ್ಯಾಟದಲ್ಲಿ ವೈಯಕ್ತಿಕ ಬಹುಮಾನ ಪಡೆದರು.


ನ.12 ತನಕ ನಿರಂತರ ಕಾರ್ಯಕ್ರಮ:
ನ. 10 ಸಂಜೆ ಗಂಟೆ 6 ರಿಂದ ಅಂತರಾಷ್ಟ್ರೀಯ ಖ್ಯಾತಿಯ ಮೆಗಾ ಮೆಜಿಷಿಯನ್ ಶ್ರೀ ಕುದ್ರೋಳಿ ಗಣೇಶ್ ಅವರಿಂದ ವಿಸ್ಮಯ ಜಾದೂ ಲೋಕದಲ್ಲೊಂದು ಪಯಣ ಕಾರ್ಯಕ್ರಮವು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪಂಡಿತ್ ದೀನ ದಯಾಳ್ ಸಭಾಭವನದಲ್ಲಿ ನಡೆಯಲಿದೆ. ಸನ್ಮಾನ ಸಮಾರಂಭದಲ್ಲಿ ಹಿರಿಯ ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿ ಸನ್ಮಾನ ಸ್ವೀಕರಿಸಲಿದ್ದಾರೆ. ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸೀತಾರಾಮ ರೈ ಸವಣೂರು ಸನ್ಮಾನಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ರಾಜ್ಯ ಜೇಸಿ ತರಬೇತುದಾರ ಎಂ.ಬಿ ಸದಾಶಿವ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕೆದಂಬಾಡಿ ರಾಮಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಹಾಗೂ ಕಾರ್ಯಕ್ರಮದಲ್ಲಿ ಹಾಲೆಮಜಲು ಆದರ್ಶ ಯೂತ್ ಕ್ಲಬ್ ಅಧ್ಯಕ್ಷ ದಿನೇಶ್ ಹಾಲೆಮಜಲು ಉಪಸ್ಥಿತರಿರುವರು.


ನ. 11.ರಂದು ರಜತ ಚಿತ್ತಾರ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ತಾರಾನಾಥ್ ಕೈರಂಗಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪೂರ್ವ ವಲಯ ಅಧಿಕಾರಿ ಪ್ರದೀಪ್ ಕುಮಾರ್ ರೈ ಪನ್ನೆ, ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ಉಪಸ್ಥಿತರಿರುವರು.ಪೋಷಕರಿಗಾಗಿ ವಿಚಾರಗೋಷ್ಠಿ-ಸೃಜನಶೀಲ ಬದುಕಿನಲ್ಲಿ ಚಿತ್ರಕಲೆ ಎಂಬ ವಿಷಯದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೊಡಗು ಶಿಕ್ಷಣ ಚಿಂತಕ ಊ. ರಾ ನಾಗೇಶ್ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ ಬಹುಮಾನ ವಿತರಣಾ ಕಾರ್ಯಕ್ರಮವು ಜರುಗಲಿದೆ. ಬಹುಮಾನ ವಿತರಕರಾಗಿ ಬಂಟ್ವಾಳ ಎಸ್ ವಿ ಎಸ್ ಕಾಲೇಜು ನಿವೃತ್ತ ಪ್ರಾಧ್ಯಾಪಕರಾದ ಶ್ರೀಮತಿ ಲೀಲಾವತಿ ಬಾಲಕೃಷ್ಣ ನೇರಳ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜೇಸಿಐ ಪಂಜ ಪಂಚಶ್ರೀ ಸಂಸ್ಥಾಪಕ ಮಾರ್ಗದರ್ಶಕ ವಾಸುದೇವ ನಡ್ಕ, ಚಾರ್ವಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ ಉಪಸ್ಥಿತರಿರುವರು. ಸಂಜೆ ಗಂಟೆ 6ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವವು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ಜರುಗಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಸರಕಾರ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್ ಅಂಗಾರ ಉದ್ಘಾಟಿಸಲಿದ್ದಾರೆ. ರಜತ ರಥ ಸ್ಮರಣ ಸಂಚಿಕೆ ಮುಖಪುಟವನ್ನು ಮಂಗಳೂರು ಲೋಕಸಭಾ ಕ್ಷೇತ್ರ ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅನಾವರಣ ಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ, ಬೆಂಗಳೂರು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್, ಹಿರಿಯ ಸಹಕಾರಿ ಧುರೀಣ ಜಾಕೆ ಮಾಧವ ಗೌಡ, ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಸುಳ್ಯ ಆಳ್ವಾಸ್ ನುಡಿಸಿರಿ ಘಟಕದ ಅಧ್ಯಕ್ಷ ಸುಧಾಕರ್ ರೈ, ಪಂಜ ಆಳ್ವಾಸ್ ನುಡಿಸಿರಿ ಘಟಕದ ಅಧ್ಯಕ್ಷ ಶಶಿಧರ ಪಳಂಗಾಯ ಉಪಸ್ಥಿತರಿರುವರು.
ನ. 12ರಂದು ಸಂಜೆ 6ರಿಂದ ಸಮಾರೋಪ ಸಮಾರಂಭವು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ನಡೆಯಲಿದೆ. ಕರ್ನಾಟಕ ಸರಕಾರದ ವಿಶ್ರಾಂತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ‘ಭವ್ಯ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ’ ಎಂಬ ವಿಷಯದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಪೂರ್ವ ವಲಯಾಧ್ಯಕ್ಷ ರಾಜೇಂದ್ರ ಭಟ್ ‘ರಜತ ರಶ್ಮಿ ಸಾಧನೆಯ ಹಾದಿಯಲ್ಲಿ ಬೆಳ್ಳಿ ಬೆಳಕು’ ಎಂಬ ವಿಷಯದಲ್ಲಿ ಸಮಾರೋಪ ಭಾಷಣ ಮಾಡಲಿದ್ದಾರೆ. ಜೇಸಿಐ ಪಂಜ ಪಂಚಶ್ರೀ ಪೂರ್ವಾಧ್ಯಕ್ಷ ತೀರ್ಥಾನಂದ ಕೊಡೆಂಕಿರಿ ಕಮಲ ಪತ್ರ ಪುರಸ್ಕಾರ ಪಡೆಯಲಿದ್ದಾರೆ. ವಲಯಾಧ್ಯಕ್ಷ ಜೇಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತ ಪುರಸ್ಕರಿಸಲಿರುವರು. ಜೇಸಿಐ ವಲಯ 15ರ ಪೂರ್ವ ವಲಯ ಅಧ್ಯಕ್ಷರುಗಳು ಉಪಸ್ಥಿತರಿರುವರು .
ಯುವ ತೇಜಸ್ಸು ಟ್ರಸ್ಟ್ ಪಂಜ, ಶಾರದಾಂಬ ಭಜನಾ ಮಂಡಳಿ ಪಂಜ, ಪಂಚಶ್ರಿ ಪಂಜ ಸ್ಪೋರ್ಟ್ಸ್ ಕ್ಲಬ್ ಗಳಿಗೆ ಪುರಸ್ಕಾರ ನಡೆಯಲಿದೆ.
ಸ್ಥಳೀಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪಂಚಶ್ರೀ ವಿದ್ಯಾನಿಧಿ ವಿತರಣೆ ನಡೆಯಲಿದೆ. ಬಳಿಕ ಪ್ರತಿಷ್ಠಿತ ತಂಡಗಳ ಮುಕ್ತ ಡ್ಯಾನ್ಸ್ ಸ್ಪರ್ಧೆ ಸಿಲ್ವರ್ ಸ್ಟೆಪ್ಸ್ 2022 ನಡೆಯಲಿದೆ.