ನ.14ರಂದು ಕಟ್ಟಡ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಂದ ಪ್ರತಿಭಟನೆ

0

2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಬಿಡುಗಡೆಗೆ ಒತ್ತಾಯಿಸಿ, ಕಲ್ಯಾಣ ಮಂಡಳಿಯ ವಿನಾಕಾರಣ ವಿಳಂಬ ಖಂಡಿಸಿ, 2021-22ನೇ ಸಾಲಿನಲ್ಲಿ ಶೈಕ್ಷಣಿಕ ಧನಸಹಾಯ ಬಾಕಿ ಹಣ ಪಾವತಿಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಂದ ನವೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ಎಪಿಎಂಸಿ ಬಳಿಯಿರುವ ಕಾರ್ಮಿಕ ವೃತ್ತ ನಿರೀಕ್ಷಕರ ಉಪಕಚೇರಿ ಬಳಿ ಪ್ರತಿಭಟನೆ ನಡೆಯಲಿರುವುದು ಎಂದು ಸಂಘಟಕರು ತಿಳಿಸಿದ್ದಾರೆ.