ಜೆ ಡಿ ಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್ ಎಲಿಮಲೆ ಮರು ನೇಮಕ

0

ಕರ್ನಾಟಕ ಪ್ರದೇಶ ಜಾತ್ಯತೀತ ಜನತಾ ದಳ (ಜೆ ಡಿ ಎಸ್) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಐ.ಕೆ. ಮಹಮ್ಮದ್ ಇಕ್ಬಾಲ್ ಎಲಿಮಲೆಯವರು ಮರು ಆಯ್ಕೆಗೊಂಡಿರುತ್ತಾರೆ. ಇವರನ್ನು ಪಕ್ಷದ ರಾಜ್ಯ ಅಧ್ಯಕ್ಷರಾದ ಸಿ ಎಂ ಇಬ್ರಾಹಿಂ ರವರು ನೇಮಕಗೊಳಿಸಿರುತ್ತಾರೆ ಎನ್ನಲಾಗಿದೆ.
ಇವರ ನೇಮಕಾತಿಗೆ ಮಾಜಿ ಮುಖ್ಯಮಂತ್ರಿಗಳಾದ ಎಚ್. ಡಿ. ಕುಮಾರಸ್ವಾಮಿ, ಪಕ್ಷದ ರಾಷ್ಟ್ರೀಯ ಕಾರ್ಯಧ್ಯಕ್ಷರು ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ಶಿಫಾರಸು ಮಾಡಿರುತ್ತಾರೆ.