ಸುಳ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಆಶಾ ಪ್ರಕಾಶ್ ಶೆಟ್ಟಿ ಬಂಟರ ಸಮುದಾಯ ಭವನದ ಲೋಕಾರ್ಪಣೆಯ ಆಮಂತ್ರಣ ಪತ್ರ ಬಿಡುಗಡೆ

0

ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ಬೂಡು ಕೇರ್ಪಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಶಾ ಪ್ರಕಾಶ್ ಶೆಟ್ಟಿ ಬಂಟರ ಸಮುದಾಯ ಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನ.19 ರಂದು ಬೂಡು ಕೇರ್ಪಳದಲ್ಲಿ ನಡೆಯಿತು.

ಸಮುದಾಯ ಭವನದ ಲೋಕಾರ್ಪಣೆಯು ಡಿ.24 ರಂದು ನಡೆಯಲಿದ್ದು ಈಗಾಗಲೇ ಅಂತಿಮ ಹಂತದ ಕೆಲಸ ಕಾರ್ಯಗಳು ಭರದಿಂದ ಪ್ರಗತಿಯಲ್ಲಿ ನಡೆಯುತ್ತಿದೆ.


ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಕೇನ್ಯ ರವೀಂದ್ರನಾಥ ಶೆಟ್ಟಿ, ಅಧ್ಯಕ್ಷ ಜಯಪ್ರಕಾಶ್ ರೈ ,ಕಾರ್ಯದರ್ಶಿ ಬಿ.ಸುಭಾಶ್ಚಂದ್ರ ರೈ,ಖಜಾಂಜಿ ಎಸ್.ಗಂಗಾಧರ ರೈ ಹಾಗೂ ಅರಂತೋಡು, ಬಾಳಿಲ, ಬೆಳ್ಳಾರೆ, ಜಾಲ್ಸೂರು, ಸುಬ್ರಹ್ಮಣ್ಯ, ಸುಳ್ಯ ವಲಯದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು, ಯುವ ಘಟಕದ ಅಧ್ಯಕ್ಷರು ಮತ್ತು ಸದಸ್ಯರು, ಮಹಿಳಾ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.