ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ತಾಂಬೂಲ ಪ್ರಶ್ನೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ೨೦೨೩ ರಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕಲಶದ ಪ್ರಯುಕ್ತ ದೇವಾಲಯದಲ್ಲಿ ಕೆಲವು ಸಮಸ್ಯೆಗಳ ಬಗ್ಗೆ ದೇಲಂಪಾಡಿ ಗಣೇಶ್ ತಂತ್ರಿಯವರ ಮಾರ್ಗದರ್ಶನದಲ್ಲಿ ಜ್ಯೋತಿಷಿ ಮಹಾಲಿಂಗೇಶ್ವರ ಶರ್ಮ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಯು ನಡೆದು ದೇವಾಲಯದ ಒಳಗಿರುವ ಕೆಲವು ಮೂರ್ತಿಗಳನ್ನು ಪೂಜಾ ವಿಧಾನಗಳ ಮುಖಾಂತರ ತೆರವುಗೊಳಿಸುವ ಬಗ್ಗೆ ಪ್ರಶ್ನೆ ಚಿಂತನೆಯಂತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಸದಸ್ಯರು, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಮತ್ತು ಸದಸ್ಯರು, ಭಕ್ತರು ಉಪಸ್ಥಿತರಿದ್ದರು.