ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಶುಭಶ್ರೀ ಮಹಿಳಾ ಮಂಡಲ ಗಾಂಧಿನಗರ ಸುಳ್ಯ ಇದರ ವತಿಯಿಂದ ಮಕ್ಕಳ ದಿನಾಚರಣೆಯು ಗಾಂಧಿನಗರ ಅಂಗನವಾಡಿ ಕೇಂದ್ರ ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಂಗನವಾಡಿಯ ಎಲ್ಲಾ ಮಕ್ಕಳಿಗೆ ಪುಸ್ತಕ ಮತ್ತು ಪೆನ್ಸಿಲನ್ನು ಶುಭಶ್ರೀ ಮಂಡಲದ ವತಿಯಿಂದ ನೀಡಲಾಯಿತು.ಶುಭಶ್ರೀ ಮಹಿಳಾ ಮಂಡಲದ ಕೋಶಾಧಿಕಾರಿ ಗಿರಿಜಾ ಎಂ. ವಿ, ಜೊತೆ ಕಾರ್ಯದರ್ಶಿ ಸುಮಂಗಲಾ ರವಿರಾಜ್ ಸಹಕರಿಸಿ ದರು.


ಇದೇ ಸಂದರ್ಭದಲ್ಲಿ ಮಕ್ಕಳ ಪೋಷಕರಿಗೆ ಸಮುದಾಯ ಆರೋಗ್ಯ ಅಧಿಕಾರಿ ಕಾವ್ಯ ರವರು ಮಕ್ಕಳಿಗೆ ಬರುವ ಮೆದುಳು ಜ್ವರದ ಸಮಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಯ ಕ್ರಮದ ಬಗ್ಗೆ ಮಾಹಿತಿ ನೀಡಿದರು.
ಅಂಗನವಾಡಿ ಕಾರ್ಯಕರ್ತೆ ಶೋಭ ಮತ್ತು ಸಹಾಯಕಿ ಪುಪ್ಪಾವತಿ ಮಕ್ಕಳ ಪೋಷಕರು ಉಪಸ್ಥಿತರಿದ್ದರು.