ಮಂಗಳೂರು ಪಶ್ಚಿಮ ವಲಯ ನೂತನ ಐಜಿಪಿಯಾಗಿ ಡಾ. ಚಂದ್ರಗುಪ್ತ ಅಧಿಕಾರ ಸ್ವೀಕಾರ

0

ಮಂಗಳೂರು ಪಶ್ಚಿಮ ವಲಯ ಐಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ದೇವಜ್ಯೋತಿ ರೇ ಅವರು ಮಾನವ ಹಕ್ಕು ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.
ಅವರ ಸ್ಥಾನಕ್ಕೆ ನೂತನ ಐಜಿಪಿಯಾಗಿ ಡಾ.ಚಂದ್ರಗುಪ್ತ ಅವರನ್ನು ಸರ್ಕಾರ ನೇಮಕ ಮಾಡಲಾಗಿದ್ದು ಈಗಾಗಲೇ ಮಂಗಳೂರು ಪಶ್ಚಿಮ ವಲಯದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.


ಡಾ.ಚಂದ್ರಗುಪ್ತ ರವರು ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಹಲವು ವರ್ಷಗಳ ಹಿಂದೆ ಪುತ್ತೂರು ವಿಭಾಗದಲ್ಲಿ ಎಎಸ್‌ಪಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.