ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವಕ್ಕೆ ಚಾಲನೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಇಂದು ಬೆಳಗ್ಗೆ 8.10 ರ ವೃಶ್ಚಿಕ ಲಗ್ನದಲ್ಲಿ ಕೊಪ್ಪರಿಗೆ ಏರುವ ಮೂಲಕ ಷಷ್ಠಿ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ರಾಮ – ಲಕ್ಷ್ಮಣ ಎಂಬ ಜೋಡಿ ಅನ್ನದ ಕೊಪ್ಪರಿಗೆಗೆ ವಿಶೇಷ ಪೂಜೆ ಸಲ್ಲಿಸಿ ಎರಡು ಒಲೆಗಳ ಮೇಲೆ ಅದನ್ನು ಏರಿಸಲಾಯಿತು.ಕೊಪ್ಪರಿಗೆಯಲ್ಲಿ ಬೆಯ್ದ ಅನ್ನ ಪ್ರಸಾದ ವಿತರಣೆ ನಡೆಯಲಿದೆ.
ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಕೊಪ್ಪರಿಗೆ ಏರುವ ಪೂಜಾ ಕಾರ್ಯಕ್ರಮ ನೆರವೇರಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.