ಬೆಳ್ಳಾರೆ : ಜೂನಿಯರ್ ರೆಡ್ ಕ್ರಾಸ್‌ ಘಟಕ ಪ್ರಾರಂಭೋತ್ಸವ ಮತ್ತು ನೈರ್ಮಲ್ಯ ಕಿಟ್ ವಿತರಣಾ ಕಾರ್ಯಕ್ರಮ

0

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕ ಪ್ರಾರಂಭೋತ್ಸವ ಮತ್ತು ನೈರ್ಮಲ್ಯ ಕಿಟ್ ವಿತರಣಾ ಕಾರ್ಯಕ್ರಮ ನ. 21 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣ ನಡೆಯಿತು. ಬೆಳ್ಳಾರೆ ಗ್ರಾಮ ಪಂಚಾಯತು ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಇವರು ಉದ್ಘಾಟಿಸಿ ಶುಭಹಾರೈಸಿದರು.

ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ, ಸುಳ್ಯ ತಾಲೂಕು ಘಟಕ ಸಭಾಪತಿಗಳಾದ ಸುಧಾಕರ ರೈ ಪಿ.ಬಿ ನೈರ್ಮಲ್ಯ ಕಿಟ್ ವಿತರಣೆ ಮಾಡಿದರು.
ಕು. ಅನಿತಾಲಕ್ಷ್ಮೀ, ತಹಶೀಲ್ದಾರರು ಸುಳ್ಯ ಮತ್ತು ಅಧ್ಯಕರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಘಟಕ ಇವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು.


ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಂಶುಪಾಲರಾದ ವಿಶ್ವನಾಥ ಗೌಡ, ಉಪ ಪ್ರಾಂಶುಪಾಲರಾದ ಶ್ರೀಮತಿ ಉಮಾಕುಮಾರಿ, ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ, ಸುಳ್ಯ ತಾಲೂಕು ಘಟಕದ ಖಜಾಂಚಿ ವಿನಯ ಕುಮಾರ್, ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ, ಸುಳ್ಯ ತಾಲೂಕು ಘಟಕದ ನಿರ್ದೆಶಕರಾದ ನವೀನ್ ಕುಮಾರ್ ರೈ ತಂಬಿನಮಕ್ಕಿ ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಪ್ರಧಾನ ಕಾರ್ಯದರ್ಶಿ ಸಂಜಯ್ ನೆಟ್ಟಾರು, ಜೂನಿಯರ್ ರೆಡ್ ಕ್ರಾಸ್ ಸಂಯೋಜಕಿ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ವೇದಿಕೆಯಲ್ಲಿ ಉಮ್ಮತಿಯಿದ್ದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಎಸ್‌.ಡಿ. ಎಂ.ಸಿ ಉಪಾಧ್ಯಕ್ಷರಾದ ಶ್ರೀನಾಥ್ ರೈ ಬಾಳಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಉಪ ಪ್ರಾಂಶುಪಾಲರಾದ ಶ್ರೀಮತಿ ಉಮಾಕುಮಾರಿ, ಸ್ವಾಗತಿಸಿ, ಶಿಕ್ಷಕರಾದ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು ಸಂಸ್ಥೆ ಎಲ್ಲಾ ಶಿಕ್ಷಕರು ಸಹಕರಿಸಿದರು.