ಎಸ್‌ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ಕಾರ್ಯಕಾರಿಣಿ ಸಭೆ

0

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿಯ ಕಾರ್ಯಕಾರಿಣಿ ಸಭೆಯು ಪಕ್ಷದ ಜಿಲ್ಲಾ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಅಧ್ಯಕ್ಷತೆಯಲ್ಲಿ ಸವಣೂರು ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಮುಂಬರುವ ತಾಲ್ಲೂಕು ಪಂಚಾಯತ್,ಜಿಲ್ಲಾ ಹಾಗೂ ವಿಧಾನಸಭಾ ಚುನಾವಣೆಯ ಬಗ್ಗೆ ಮತ್ತು ಪಕ್ಷದ ನಿಧಿ ಸಂಗ್ರಹದ ಬಗ್ಗೆ ಹಾಗೂ ವೋಟರ್ ಲಿಸ್ಟ್ ನಲ್ಲಿ ಮತದಾರರ ಹೆಸರು ಬಿಟ್ಟು ಹೋಗಿರುವ ಬಗ್ಗೆ ಪರಿಶೀಲಿಸುವ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ,ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ,ಜಿಲ್ಲಾ ಸಮಿತಿ ಸದಸ್ಯರಾದ ಖಾದರ್ ಫರಂಗಿಪೇಟೆ, ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಬಾಬು ಎನ್ ಸವಣೂರು, ಕಾರ್ಯದರ್ಶಿ ಯಾದ ರಫೀಕ್ ಎಂ.ಎ ಸೇರಿದಂತೆ ವಿವಿದ ಬ್ಲಾಕ್‌ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಅನ್ವರ್ ಸಾದಾತ್ ಬಜತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿದರು ರಫೀಕ್ ಎಮ್ ಎ ಸ್ವಾಗತಿಸಿ, ಬಾಬು ಎನ್ ಸವಣೂರು ಧನ್ಯವಾದ ಗೈದರು