ಸುಬ್ರಹ್ಮಣ್ಯ:ಒಳಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿರುವುದಾಗಿ ಕಾಂಗ್ರೆಸ್ ಗ್ರಾಮ ಸಮಿತಿ ಆಕ್ಷೇಪ, ಗ್ರಾ.ಪಂ ಗೆ ದೂರು

0

ಸುಬ್ರಹ್ಮಣ್ಯದಲ್ಲಿ ಒಳಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿರುವುದಾಗಿ ಆಕ್ಷೇಪಿಸಿ ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ವತಿಯಿಂದ ಇಂದು ಪಂಚಾಯತಿಗೆ ಮನವಿ ಸಲ್ಲಿಸಲಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ ನಿರ್ವಹಿಸಲ್ಪಡುತ್ತಿರುವ ಒಳ ಚರಂಡಿ ವ್ಯವಸ್ಥೆ ಹದಗೆಟ್ಟಿದ್ದು ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ರೋಗ ಹರಡುವ ಭೀತಿ ಇದೆ ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳ ಬೇಕಾಗಿ ಮನವಿಯಲ್ಲಿ ಕೋರಲಾಗಿದೆ.

ಇದಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಕೋಮು ದ್ವೇಷ ಭಾವನೆ ಬರುವ ಬ್ಯಾನರ್ ಅಳವಡಿಸಿರುವುದನ್ನು ತೆರವು ಮಾಡಲು, ಕಾಶಿಕಟ್ಟೆ, ಸವಾರಿ ಮಂಟಪ ಬಳಿ ರಸ್ತೆ ಬದಿಗಳಲ್ಲಿ ಸೂಚನಾ ಫಲಕ ಅಳವಡಿಸಲು ಹಾಗೂ ರಥ ಬೀದಿಯಲ್ಲಿರುವ ಹಳೆ ಅಂಚೆ ಕಚೇರಿಯ ಕಟ್ಟಡವನ್ನು ತೆರವಿಗೊಳಿಸಿ, ಸಂಭಾವ್ಯ ಅಪಾಯವನ್ನು ತಪ್ಪಿಸುವಂತೆ ಮನವಿಯಲ್ಲಿ ಕೋರಲಾಗಿದೆ. ಮನವಿಯನ್ನು ಸುಬ್ರಹ್ಮಣ್ಯ ಗ್ರಾ.ಪಂ ಗೆ ಸಲ್ಲಿಸಲಾಗಿದ್ದು ಗ್ರಾ.ಪಂ ಪ್ರಭಾರ ಪಿಡಿಒ ಮೋನಪ್ಪ, ಗ್ರಾ.ಪಂ ಅಧ್ಯಕ್ಷೆ ಲಲಿತಾ ಗುಂಡಡ್ಕ , ಗ್ರಾ.ಪಂ ಸದಸ್ಯರು ಉಪಸ್ಥಿತಿಯಲ್ಲಿ ಮನವಿ ನೀಡಲಾಯಿತು.